Tuesday, June 24, 2025
27.5 C
Bengaluru
Google search engine
LIVE
ಮನೆUncategorizedಬೃಹತ್ ಮಾನವ ಸರಪಳಿ ಹಾಗೂ ಜಾಗೃತಿ ಜಾಥಾಗೆ ಚಾಲನೆ

ಬೃಹತ್ ಮಾನವ ಸರಪಳಿ ಹಾಗೂ ಜಾಗೃತಿ ಜಾಥಾಗೆ ಚಾಲನೆ

ಲೋಕಸಭಾ ಚುನಾವಣಾ ಹಿನ್ನೆಲೆ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಲಹಂಕ ನ್ಯೂ ಟೌನ್ ನಲ್ಲಿರುವ ಹೊಯ್ಸಳ ಮೈದನಾದಲ್ಲಿ ಏರ್ಪಡಿಸಿದ್ದ ಮಾನವ ಸರಪಳಿ ಹಾಗೂ ಜಾಗೃತಿ ಜಾಥಾಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಬೃಹತ್ ಮಾನವ ಸಪಳಿ ನಿರ್ಮಾಣ:

ಯಲಹಂಕ ನ್ಯೂ ಟೌನ್ ನಲ್ಲಿರುವ ಹೊಯ್ಸಳ ಮೈದಾನದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಮತದಾನ ಪ್ರತಿಜ್ಙಾ ವಿಧಿ ಸ್ವೀಕರಿಸುವ ಜೊತೆಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು.

ಕಾಲ್ನಡಿಗೆ ಜಾಥಾ ಸಾಗಿದ ಹಾದಿ:

ಯಲಹಂಕ ನ್ಯೂ ಟೌನ್ ನಲ್ಲಿರುವ ಹೊಯ್ಸಳ ಮೈದಾನದಿಂದ ಪ್ರಾರಂಭವಾದ ಕಾಲ್ನಡಿಗೆ ಜಾಥಾ ನ್ಯೂ ಟೌನ್ ಮುಖ್ಯರಸ್ತೆ ಮಾರ್ಗವಾಗಿ 16ನೇ ಬಿ ಕ್ರಾಸ್ ರಸ್ತೆ, ಚಿಕ್ಕಬೊಮ್ಮಸಂದ್ರ ವೃತ್ತ, ಜ್ಞಾನಜ್ಯೋತಿ ವೃತ್ತ, 2ನೇ ಎ ಕ್ರಾಸ್ ರಸ್ತೆ ಮೂಲಕ ಸಾಗಿ ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು.

ವಿದ್ಯಾರ್ಥಿಗಳು, ಅಧಿಕಾರಿ/ಸಿಬ್ಬಂದಿಗಳು ಹಾಗೂ ನಾಗರೀಕರು ಭಾಗಿ:

ಕಾಲ್ನಡಿಗೆ ಜಾಥಾವು ಡೊಳ್ಳುಕುಣಿತ, ವೀರಗಾಸೆಯ ಜೊತೆಗೆ ಚುನಾವಣಾ ಗೀತೆಯನ್ನು ಹಾಕಿಕೊಂಡು ನಾನಾ ಘೋಷಣೆಗಳನ್ನು ಕೂಗುತ್ತಾ ಸಾಗಿತು. ಜಾಥಾದಲ್ಲಿ ವಿದ್ಯಾಥಿಗಳುಕಾಲ್ನಡಿಗೆಯ ಮೂಲಕ ಸಾಗಿದರೆ, ಅಧಿಕಾರಿ/ಸಿಬ್ಬಂದಿಗಳು ಹಾಗೂ ನಾಗರೀಕರು ದ್ವಿಚಕ್ರಗಳ ಮೂಲಕ ಸಾಗಿದರು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಚುನಾವಣಾ ರಾಯಭಾರಿಯಾದ ನೀತು ವನಜಾಕ್ಷಿ, ಕಾರ್ಯನಿರ್ವಾಹಣಾ ಅಧಿಕಾರಿಗಳಾದ ಅಪೂರ್ವ ಕುಲಕರ್ಣಿ, ರಮೇಶ್, 1000ಕ್ಕೂ ವಿದ್ಯಾರ್ಥಿಗಳು, ಅಧಿಕಾರಿ/ಸಿಬ್ಬಂದಿಗಳು, ನಾಗರೀಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments