Wednesday, August 20, 2025
18.3 C
Bengaluru
Google search engine
LIVE
ಮನೆ#Exclusive Newsದೇವೇಗೌಡರ ಆಶೀರ್ವಾದ ನಮ್ಮ ಮಠದ ಮೇಲಿರಲಿ : ನಿಶ್ಚಲಾನಂದನಾಥ ಸ್ವಾಮೀಜಿ

ದೇವೇಗೌಡರ ಆಶೀರ್ವಾದ ನಮ್ಮ ಮಠದ ಮೇಲಿರಲಿ : ನಿಶ್ಚಲಾನಂದನಾಥ ಸ್ವಾಮೀಜಿ

ಬೆಂಗಳೂರು : ನಾನು ಇಂದು ಸಮಾಜಕ್ಕೆ ಅರ್ಪಣೆಯಾಗಲು ತುಮ ಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶ್ರೀಗಳು ಕಾರಣ. ನಾಡು ಕಂಡ ಮುತ್ಸದಿ ರಾಜಕಾರಣಿ, ಮಾಜಿ ಪ್ರಧಾನಿ ದೇವೇ ಗೌಡರ ಆಶೀರ್ವಾದವು ನಮಗೆ ಸಿಕ್ಕಿದೆ. ಅವರ ಆಶೀರ್ವಾದ ಮಠದ ಮೇಲೆ ಸದಾ ಇರಲಿ. ಮಠದ ಅಭಿ ವೃದ್ಧಿಗೆ ಎಲ್ಲರ ಸಹಕಾರ ಬೇಕು ಎಂದು ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಹಾಗೂ ಆದಿಚುಂಚನಗಿರಿ ಮಠ ಎರಡೂ ಒಂದೇ. ನಾವೆಲ್ಲಾ ಒಂದೇ ಗುರು ಪರಂಪರೆಯವರಾಗಿದ್ದು. ನಾಥ ಪರಂಪರೆ ಮೂಲಕ ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.”ಮೈಸೂರು ರಸ್ತೆ ಕೆಂಗೇರಿಯಲ್ಲಿರುವ ಮಠದ ಆವರಣದಲ್ಲಿ ಭಾನುವಾರ ಬೆಳಗ್ಗೆ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಧಿಕಾರ ಮಹೋತ್ಸವದಲ್ಲಿ ಮಾತನಾಡಿದ ಅವರು, ಮಠದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ಬಹಳಷ್ಟು ಕೊಡುಗೆ ನೀಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments