ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಗಟ್ಟಿ ಇದ್ದಾರೆ. ಸಿಎಂ ಕುರ್ಚಿ ಸಹ ಗಟ್ಟಿಯಿದೆ. ಆದರೆ ಅಲಗಾಡುತ್ತಿರುವುದು ಬಿವೈ ವಿಜಯೇಂದ್ರ ಅವರ ಕುರ್ಚಿ ಎಂದು ಟಾಗ್ ಕೊಟ್ಟಿದ್ದಾರೆ.