Tuesday, February 24, 2026
29.9 C
Bengaluru
Google search engine
LIVE
ಮನೆರಾಜಕೀಯಸಚಿವ ಜಮೀರ್‌ಗೆ ಸಂಕಷ್ಟ? ಲೋಕಾಯುಕ್ತ ಕಚೇರಿಗೆ ಕೆ.ಜಿ.ಎಫ್ ಬಾಬು ಎಂಟ್ರಿ!

ಸಚಿವ ಜಮೀರ್‌ಗೆ ಸಂಕಷ್ಟ? ಲೋಕಾಯುಕ್ತ ಕಚೇರಿಗೆ ಕೆ.ಜಿ.ಎಫ್ ಬಾಬು ಎಂಟ್ರಿ!

ಸಚಿವ ಜಮೀರ್ ಅಹಮದ್ ಖಾನ್ ಗೆ ಸಂಬಂಧಿಸಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವರಿಗೆ ಕೋಟಿ ಕೋಟಿ ಹಣ ನೀಡಿದ ಆರೋಪ ಎದುರಿಸುತ್ತಿರುವ ಉದ್ಯಮಿ ಹಾಗೂ ಮಾಜಿ ಕಾಂಗ್ರೆಸ್ ಮುಖಂಡ ಕೆ.ಜಿ.ಎಫ್ ಬಾಬು ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಜಮೀರ್ ಅಹಮದ್ ಖಾನ್ ಅವರ ಮೇಲೆ ಈ ಹಿಂದೆ ಎಸಿಬಿ ದಾಖಲಿಸಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಈಗ ಲೋಕಾಯುಕ್ತ ಮುಂದುವರಿಸಿದೆ. ಈ ತನಿಖೆಯ ವೇಳೆ ಜಮೀರ್ ಅವರಿಗೆ ಕೆ.ಜಿ.ಎಫ್ ಬಾಬು ಸುಮಾರು 4 ಕೋಟಿ ರೂಪಾಯಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಣದ ವ್ಯವಹಾರದ ಮೂಲ ಹಾಗೂ ಉದ್ದೇಶದ ಬಗ್ಗೆ ಸ್ಪಷ್ಟತೆ ಪಡೆಯಲು ಲೋಕಾಯುಕ್ತ ಅಧಿಕಾರಿಗಳು ಬಾಬು ಅವರಿಗೆ ನೋಟಿಸ್ ಜಾರಿ ಮಾಡಿದ್ದರು.

ಈಗಾಗಲೇ ಮಾಧ್ಯಮಗಳ ಮುಂದೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಜಿ.ಎಫ್ ಬಾಬು, “ನಾನು ಸಚಿವ ಜಮೀರ್ ಅಹಮದ್ ಅವರಿಂದ ಸಾಲ ಪಡೆದಿದ್ದೆ, ಆ ಹಣವನ್ನು ಮರುಪಾವತಿ ಮಾಡಿದ್ದೇನೆ ಅಷ್ಟೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದಾಗ್ಯೂ, ತನಿಖಾಧಿಕಾರಿಗಳು ಈ ಹಣಕಾಸಿನ ವಹಿವಾಟಿನ ದಾಖಲೆಗಳನ್ನು ಪರಿಶೀಲಿಸಲು ಮುಂದಾಗಿದ್ದು, ಇಂದು ಬಾಬು ನೀಡುವ ಹೇಳಿಕೆ ಸಚಿವ ಜಮೀರ್ ಅವರಿಗೆ ನುಂಗಲಾರದ ತುತ್ತಾಗುವ ಸಾಧ್ಯತೆಯಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments