#Exclusive NewsTop Newsರಾಜಕೀಯಸುದ್ದಿ
ಹಳ್ಳಿಹಕ್ಕಿಗೆ ಟಾಂಗ್ ಕೊಟ್ಟ ಸಚಿವ ಸುಧಾಕರ್..!

ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.
ಈ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಎಂ.ಸಿ. ಸುಧಾಕರ್, ಹೆಚ್. ವಿಶ್ವನಾಥ್ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ. ಹೆಚ್. ವಿಶ್ವನಾಥ್ ಅವರೇ ನೀವು ಮೊದಲು ಬಿಜೆಪಿಯ ಮನೆ ಸರಿಪಡಿಸಿಕೊಳ್ಳಿ. ನಿಮ್ಮ ಅನುಭವವನ್ನು ಬಿಜೆಪಿಯ ಉದ್ಧಾರಕ್ಕೆ ಬಳಸಿಕೊಳ್ಳಿ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ನಮ್ಮ ಪಕ್ಷದ ಹೈಕಮಾಂಡ್ಗೆ ಬಿಟ್ಟ ನಿರ್ಧಾರ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡೋಕೆ ಹೆಚ್. ವಿಶ್ವನಾಥ್ ಯಾರು? ಅವರೇನೂ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸಚಿವ ಎಂ.ಸಿ. ಸುಧಾಕರ್ ಕಿಡಿಕಾರಿದ್ದಾರೆ.




