ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಿಎಲ್ಪಿ ಸಭೆಯ ಬಳಿಕ ಸಚಿವರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಸಚಿವ ಶರಣ್ಪ್ರಕಾಶ್ ಪಾಟೀಲ್ ಮತ್ತು ಸಚಿವ ಬೋಸರಾಜು ಅವರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ.
ರಾಯಚೂರು ಜಿಲ್ಲೆಯ ಕೆಲವು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸಚಿವ ಬೋಸರಾಜು ಅವರು ಆಕ್ಷೇಪ ವ್ಯಕ್ತಪಡಿಸಿದ್ದೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ತಮ್ಮ ಹಿಡಿಯ ಸಾಧಿಸುವ ಸಲುವಾಗಿ ಶರಣ್ಪ್ರಕಾಶ್ ಪಾಟೀಲ್ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಬೋಸುರಾಜು ಆರೋಪಿಸಿದ್ದಾರೆ.