ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು ಒದಗಿಸುವ ಯೋಜನೆ ಇದಾಗಿದೆ. ಬುಧವಾರ ಮಧ್ಯಪ್ರದೇಶದ ಖಜುರಾಹೋಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಮಧ್ಯಪ್ರದೇಶದ ಬುಂದೇಲ್ಖಂಡದ ಭವಿಷ್ಯವನ್ನು ಬದಲಿಸಲಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದಲ್ಲಿ ಬುಧವಾರ ಮಧ್ಯಪ್ರದೇಶದಲ್ಲಿ ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಿ ಲಕ್ಷಾಂತರ ರೈತ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯಿಂದ ಈ ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯವೂ ದೊರೆಯಲಿದೆ.
ಕಳೆದ 1 ವರ್ಷದಲ್ಲಿ ಅಭಿವೃದ್ಧಿಗೆ ಹೊಸ ಗತಿ ಸಿಕ್ಕಿದೆ.ಇಂದು ಕೋಟ್ಯಂತರ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಶಂಕುಸ್ಥಾಪನೆ ಮಾಡಲಾಗಿದೆ.ಇಂದು ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೂ ಇಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು.


