Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್​ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಭಿಮಾನಿಗಳು ಟೀಮ್ ಇಂಡಿಯಾ ಪರ ಹಾಗೂ ಸಿರಾಜ್​ಗೆ ಜೈಕಾರ ಹಾಕಿದರು. ಇದೀಗ ಮೊಹಮ್ಮದ್ ಸಿರಾಜ್​ಗೆ ನೀಡಲಾದ ಅದ್ಧೂರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ನ್ಯೂಯಾರ್ಕ್ ಪಿಚ್​ನಲ್ಲಿ ಆಡಲಾದ ಮೂರು ಪಂದ್ಯಗಳಲ್ಲೂ ಸಿರಾಜ್​ ಅವಕಾಶ ಪಡೆದಿದ್ದರು. ಈ ವೇಳೆ ಒಂದು ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಿರಾಜ್ 7 ರನ್ ಬಾರಿಸುವ ಮೂಲಕ ಉಪಯುಕ್ತ ಕಾಣಿಕೆ ನೀಡಿದ್ದರು. ಅಂತಿಮವಾಗಿ ಈ ಪಂದ್ಯದಲ್ಲಿ ಭಾರತ ತಂಡ 6 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು.

ಇನ್ನು ಮೂರು ಪಂದ್ಯಗಳಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದ ಸಿರಾಜ್, ಎರಡು ಬಾರಿ ಡ್ರೆಸ್ಸಿಂಗ್ ರೂಮ್​ನಲ್ಲಿ ನೀಡಲಾಗುವ ಬೆಸ್ಟ್ ಫೀಲ್ಡರ್ ಪ್ರಶಸ್ತಿ ಪಡೆದಿದ್ದರು. ಇದೀಗ ವಿಶ್ವಕಪ್ ಗೆದ್ದ ತಂಡದ ಭಾಗವಾಗಿರುವ ಹೈದರಾಬಾದ್​ ಆಟಗಾರನಿಗೆ ತವರಿನ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.

ಸದ್ಯ ಝಿಂಬಾಬ್ವೆ ಸರಣಿಯಿಂದ ಹೊರಗುಳಿದಿರುವ ಟೀಮ್ ಇಂಡಿಯಾ ಮೊಹಮ್ಮದ್ ಸಿರಾಜ್ ಇದೇ ತಿಂಗಳ ಅಂತ್ಯದಲ್ಲಿ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments