Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ

ಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪರಿಷತ್‌ ಕಲಾಪದಲ್ಲಿಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಸಿಎಂ, ಶೀಘ್ರದಲ್ಲೇ ಗೃಹಲಕ್ಷ್ಮಿ ಹಣ ನೀಡಲಾಗುವುದು. ಅಲ್ಲದೇ ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ ಎಂದು ತಿಳಿಸಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments