Top Newsಸುದ್ದಿ

ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

ಮೈಸೂರು: ಮುಡಾದಲ್ಲಿ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸಿಎಂ ಬಳಿಕ ಮತ್ತೊಬ್ಬ ರಾಜಕಾರಣಿ ವಿರುದ್ಧ ದೂರು ನೀಡಿದ್ದಾರೆ.

ಹೌದು. 50:50 ನಿವೇಶನ ಪಡೆಯುವಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿದ್ದು, ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದಾಖಲೆ ಸಮೇತ ದೂರು ನೀಡಿದ್ದಾರೆ.

ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದ ಭೂಮಿಗೆ ಅಕ್ರಮವಾಗಿ 50:50 ಪರಿಹಾರ ಕೊಡಿಸಲಾಗಿದೆ. ಜಿ.ಟಿ ದೇವೇಗೌಡರ ಪ್ರಭಾವ ಬಳಸಿ ಚೌಡಯ್ಯ ಎಂಬವರ ಹೆಸರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್‌ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನ ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಕ್ರಯ ಮಾಡಿಸಿದ್ದಾರೆ.

ಇದರಲ್ಲಿ ಜಿ.ಟಿ ದೇವೇಗೌಡ ಅವರ ಪ್ರಭಾವ ಇರುವುದು ದಟ್ಟವಾಗಿದೆ. ಆರ್‌ಟಿಸಿಯಲ್ಲಿ ಸರ್ಕಾರಿ ಭೂಮಿ ಎಂದು ಇದೆ. ಈ ವ್ಯಾಜ್ಯ ಕೋರ್ಟ್‌ನಲ್ಲಿ ಬಾಕಿ ಇದೆ. ಆದಾಗ್ಯೂ ಜಿಟಿಡಿ ತಮ್ಮ ಕುಟುಂಬಕ್ಕೆ 50:50 ನಿವೇಶನ ಬರೆಸಿಕೊಂಡಿರುವ ಅನುಮಾನವಿದೆ. ಮುಡಾ ವ್ಯಾಪ್ತಿಗೆ ಭೂಮಿ ಬರದಿದ್ದರೂ, ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಮಾಡಲಾಗಿದೆ. ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button