Wednesday, January 28, 2026
16.4 C
Bengaluru
Google search engine
LIVE
ಮನೆ#Exclusive NewsTop Newsಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ ಜನ್ರು ವೋಟು ಹಾಕೋದು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ ಜನ್ರು ವೋಟು ಹಾಕೋದು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.

ಚಿತ್ರದುರ್ಗದ ಭರಮಸಾಗರದಲ್ಲಿ ನಡೆದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳೇ ನೀವು ಅಯೋಗ್ಯರ ಪರ ನೀವು ಯಾಕೆ ಪ್ರಚಾರ ಮಾಡುತ್ತೀರಾ? ಇನ್ಮೇಲೆ ಇಂತಹ ಕೆಲಸ ಮಾಡಬೇಡಿ. ಈಗಿರುವ ಪಕ್ಷಗಳು ಯೋಗ್ಯವಲ್ಲ ಅಂತ ಬಹಿರಂಗವಾಗಿ ಆಗದಿದ್ರೆ ಗುಟ್ಟಾಗಿಯಾದರು ನೀವು ಹೇಳಬೇಕು ಎಂದು ಸಭೆಯಲ್ಲಿ ಮಾತನಾಡಿದ್ರು.

ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗಬೇಕು, ಯಾರನ್ನು ಕಿತ್ತುಹಾಕಬೇಕೆಂಬ ಹೋರಾಟ ನಡೆಯುತ್ತಿದೆ. ವಿಪಕ್ಷದಲ್ಲಿ ಪಾರ್ಟಿ ಅಧ್ಯಕ್ಷ ಯಾರಾಗಬೇಕು, ಆಗದೇ ಇರೋರು ಯಾರಾಗಬೇಕು ಅಂತಿದ್ರೆ, ಇನ್ನೊಬ್ರು ಹೇಳ್ತಾರೆ ಯಾರು ಹೇಗಾದರೂ ಹಾಳಾಗಲಿ ನಾನು, ನನ್ನ ಮಗ, ಮೊಮ್ಮಗ ಏನು ಬೇಕಾದರು ಆಗಲು ಅನುಕೂಲ ಮಾಡಿಕೊಡಿ ಅಂತ ಹೇಳುತ್ತಾರೆ ಎಂದು ಮೂರು ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments