ಯಾದಗಿರಿ : ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸಲ್ಮಾನರು ಪ್ರತಿಭಟನೆ ನಡೆಸಿದರು. ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಮಹಾಂತಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಯತ್ನಾಳ್ ಹಠಾವೋ, ಕರ್ನಾಟಕ ಬಚಾವೋ ಘೋಷಣೆಗಳನ್ನು ಕೂಗಲಾಯಿತು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಯತ್ನಾಳ್ , ಮೊಹ್ಮದ ಪೈಗಂಬರ್ ಬಗ್ಗೆ ಅವಹೇಳನಕಾರಿ ಭಾಷಣೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಯತ್ನಾಳ ನಿನು ನಕಲಿ ಹಿಂದುವಾದಿ, ನಿನಗೆ ಹಿಂದು ಧರ್ಮದ ಬಗ್ಗೆ ಗೌರವ ಇಲ್ಲ,ಬೇರೆ ಧರ್ಮದ ಬಗ್ಗೆ ಅವಹೇಳನಕಾರಿ ಭಾಷಣ ಮಾಡುವುದು ಸರಿಯಲ್ಲ.ಅನ್ಯ ಧರ್ಮದ ಬಗ್ಗೆ ಮಾತನಾಡುವ ಯತ್ನಾಳ್ ಮೇಲೆ ಕೇಸ್ ದಾಖಲಿಸಬೇಕು ಎಂದು ಸರ್ಕಾರಕ್ಕೆ ಮುಸ್ಲಿಂ ನಾಯಕರು ಆಗ್ರಹಿಸಿದರು.
ಆದಷ್ಟೂ ಬೇಗ ಜಾತಿ ಗಣತಿ ಕಾನೂನಾತ್ಮಕವಾಗಿ ಜಾರಿಗೊಳಿಸಿ:
ಜಾತಿ ಗಣತಿ ಜಾರಿಗೆ ಗೊಳಿಸಿದರೆ ಎಲ್ಲಾ ಹಿಂದುಳಿದ ಸಮಾಜದವರು ಒಗ್ಗೂಡಿ ಸಮಾನವಾಗಿ ಬದುಕಲು ಅವಕಾಶ ಮಾಡಿಕೊಟ್ಟಂತೆ ಆಗುತ್ತೆ ಎಂದು ಸರ್ಕಾರಕ್ಕೆ ದಸ್ತಗೀರ ಮುಲ್ಲಾ ಅವರು ಮನವಿ ಕೊಂಡರು.