ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ಅವರನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಪ್ರಕರಣದಲ್ಲಿ ಯಾವುದೇ ಮಂತ್ರಿಗಳು ಇಲ್ವಾಲ್ ಆಗಿಲ್ಲ, ಯಾರ ಇನ್ವಾಲ್ಮೆಂಟ್ ಕೂಡ ಇಲ್ಲ. ಕೇಂದ್ರದ ತನಿಖಾ ಸಂಸ್ಥೆ ತನಿಖೆ ನಡೆಸ್ತಿದೆ. ತನಿಖೆ ನಡೆಯಲಿ ಎನ್ನುವ ಮೂಲಕ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.