Top Newsರಾಜಕೀಯರಾಜ್ಯ

ವಿಧಾನಪರಿಷತ್​ ಸದಸ್ಯರಾಗಿ ನಾಲ್ವರ ನಾಮ ನಿರ್ದೇಶನ

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಹಲವು ತಿಂಗಳುಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್​ಸಿ ಸ್ಥಾನಗಳ ಅನುಮೋದಿಸಿ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಕೆಪಿಸಿಸಿ ಮುಖಂಡ ರಮೇಶ್​ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ. ಶಿವಕುಮಾರ್​​ ಮತ್ತು ದಲಿತ ಮುಖಂಡ ಎಫ್​.ಹೆಚ್​ ಜಕ್ಕಪ್ಪನವರ್​ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ರಮೇಶ್‌ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.

Comments (0)

Your email address will not be published. Required fields are marked *

Back to top button