Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಹೊಸವರ್ಷ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಅಸ್ತ್ರ

ಹೊಸವರ್ಷ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಅಸ್ತ್ರ

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್‌ಗಳನ್ನು ಬಳಸಿ, ಅನುಮಾನಾಸ್ಪದ ವ್ಯಕ್ತಿಗಳನ್ನು ಪರೀಕ್ಷಿಸಲಾಗುತ್ತದೆ. ಡ್ರಗ್ಸ್ ಪೆಡ್ಲರ್‌ಗಳು ಮತ್ತು ವ್ಯಸನಿಗಳ ಮೇಲೆ ನಿಗಾ ಇಡಲಾಗಿದೆ. 21 ವರ್ಷದೊಳಗಿನವರು ಪಬ್‌ಗಳಿಗೆ ಪ್ರವೇಶಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ಡಿಸೆಂಬರ್​ 08: ಹೊಸ ವರ್ಷವನ್ನು (New Year) ಸ್ವಾಗತಿಸಲು ಜನರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೆಸ್ಟೋರೆಂಟ್​ ಮತ್ತು ಪಬ್​ಗಳು ಹೊಸ ವರ್ಷಕ್ಕೆ ಆಶ್ಚರ್ಯಕರ ಆಫರ್​ಗಳನ್ನು ನೀಡಲು ಸಿದ್ದವಾಗಿವೆ. ಎಂಜಿ ರೋಡ್, ಬ್ರಿಗೇಡ್​ ರೋಡ್​ ಮತ್ತು ಕೋರಮಂಗಲದ ಪಬ್​ಗಳಲ್ಲಿ ಪಾರ್ಟಿ ಮಾಡಿ, ನಶೆಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ, ನೀವೇನಾದರು ನಶೆಯಲ್ಲಿ ಹೊರಗಡೆ ಓಡಾಡಿದರೆ ಪೊಲೀಸರ (Police) ಕೈಯಲ್ಲಿ ಲಾಕ್​ ಆಗುವುದು ಪಕ್ಕಾ.

ಹೌದು, ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಡ್ರಗ್ಸ್​ ಜಾಲದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೆ ಹಲವು ಕಡೆ ದಾಳಿ ಮಾಡಿ, ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ, ಮಾದಕ ವಸ್ತು ಅಥವಾ ಮದ್ಯಪಾನ ಮಾಡಿ ರಸ್ತೆಗಳಲ್ಲಿ ಸುತ್ತಾಡುವರನ್ನು ಪತ್ತೆ ಹಚ್ಚಲು ಪೊಲೀಸರು ತಪಾಸಣಾ ಕಿಟ್​ವೊಂದನ್ನು ಖರೀದಿಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ಒಂದು ವಾರಕ್ಕೂ ಮುಂಚೆಯೇ ತಪಾಸಣೆ ಆರಂಭಿಸಲಿದ್ದಾರೆ. ಅನುಮಾನ ಬಂದವರನ್ನು ತಪಾಸಣೆಗೆ ಒಳಪಡಿಸುತ್ತಾರೆ. ಈ ಕಿಟ್​​ನಿಂದ ಕ್ಷಣಾರ್ಧದಲ್ಲೇ ವರದಿ ಬರಲಿದೆ. ಈ ತಪಾಸಣಾ ಕಿಟ್​ ಏಕಕಾಲದಲ್ಲಿ ಆರು ಟೆಸ್ಟಿಂಗ್ ರಿಪೋರ್ಟ್ ನೀಡುತ್ತದೆ. ಮೆತ್ ಆಂಫೆಟಮೈನ್, ಕೊಕೇನ್, ಓಪಿಐಓಡಿಎಸ್ ಸೇರಿದಂತೆ ಆರು ಮಾದಕ ದ್ರವ್ಯಗಳನ್ನು ತಪಾಸಣೆ ನಡೆಸಲಿದೆ. ಮಧ್ಯಪಾನ ಸೇರಿದಂತೆ ಗಾಂಜಾಸೇವನೆ, ಡ್ರಗ್ ಸೇವನೆ ​ವರದಿ ನೀಡಲಿದೆ.

ಈಗಾಗಲೆ ಪೊಲೀಸರ 120ಕ್ಕೂ ಹೆಚ್ಚು ಡ್ರಗ್​ ವ್ಯಸನಿಗಳ ಮೇಲೆ ಕಣ್ಣು ಇಟ್ಟಿದ್ದಾರೆ. ಹಾಗೇ, ಡ್ರಗ್ಸ್​ ಪೆಡ್ಲರ್​ಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ. 21 ವರ್ಷದ ಒಳಗಿರುವ ಯುವಕ, ಯುವತಿಯರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. 21 ವರ್ಷದ ಒಳಗಿನ ಯುವಕ, ಯುವತಿಯರು ಪಬ್​ ಅಥವಾ ಬಾರ್​ಗೆ ಪ್ರವೇಶಿಸಿದರೇ, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಸವನಗೌಡನ ಬಂಧಿತ ಆರೋಪಿ. 218ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ. ಅಬಕಾರಿ ಇನ್ಸ್​ಪೆಕ್ಟರ್ ವಿಠ್ಠಲ ಪೀರಣ್ಣನವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಬಕಾರಿ ಪೊಲೀಸರು ಎನ್​ಡಿಪಿಎಸ್​​ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments