Wednesday, January 28, 2026
24.9 C
Bengaluru
Google search engine
LIVE
ಮನೆ#Exclusive News‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್

‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್‌ನ ಪೂರ್ವ ಬಿಡುಗಡೆ ಕಾರ್ಯಕ್ರಮವು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆಯಿತು. ಶಂಕರ್ ನಿರ್ದೇಶನದ ಈ ಸಿನಿಮಾ ಇದೇ ತಿಂಗಳ 10ರಂದು ತೆರೆಗೆ ಬರಲಿದೆ.ಸಿನಿಮಾ ಪ್ರೀ ರಿಲೀಸ್ ಇವೆಂಟ್​ಗೆ ಮುಖ್ಯ ಅತಿಥಿಯಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಉಪಸ್ಥಿತಿಯಿಂದಾಗಿ ಗಮನ ಸೆಳೆಯಿತು.

ಈ ವೇಳೆ ಮಾತನಾಡಿದ ಪವನ್ ಕಲ್ಯಾಣ್, ತಮ್ಮ ಹಾಗೂ ರಾಮ್ ಚರಣ್ ಅವರ ಸಾಧನೆಗೆ ಮೆಗಾಸ್ಟಾರ್ ಚಿರಂಜೀವಿಯೇ ಕಾರಣ ಎಂದು ಹೇಳಿದ್ದಾರೆ. “ನಾನೇ ಆಗಿರಲಿ, ರಾಮ್ ಚರಣ್ ಆಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಎಲ್ಲದಕ್ಕೂ ಮೂಲ ಚಿರಂಜೀವಿ  ಕಾರಣ.

ಚಿರಂಜೀವಿ ಪಟ್ಟ ಕಷ್ಟಗಳನ್ನು ನೆನಪು ಮಾಡಿಕೊಂಡು ಭಾವುಕರಾದ ಪವನ್ ಕಲ್ಯಾಣ್, ‘ನಮ್ಮ ಅಣ್ಣ ಬಹಳ ಕಷ್ಟಪಟ್ಟು ಶ್ರಮಪಟ್ಟು ಅವರು ಬೆಳೆದು ನಮಗೆಲ್ಲ ಆಸರೆಯಾದರು. ಆ ದಿನಗಳಲ್ಲಿ ನನಗೆ ನೆನಪಿದೆ, ಅವರು ಬಹಳ ತಡವಾಗಿ ಮನೆಗೆ ಬರುತ್ತಿದ್ದರು. ಅವರು ಧರಿಸಿದ್ದ ಶೂ ಸಹ ತೆಗೆದುಕೊಳ್ಳಲು ಆಗದಷ್ಟು ಸುಸ್ತಾಗಿರುತ್ತಿದ್ದರು. ನಾನು ಅವರ ಶೂ ತೆಗೆದರೆ ಕಾಲೆಲ್ಲ ಊದಿಕೊಂಡಿರುತ್ತಿತ್ತು. ಅಷ್ಟು ಕಷ್ಟುಪಟ್ಟು ಅವರು ಆಗ ಕೆಲಸಮಾಡಿದವರು. ಅವರನ್ನು ನೋಡಿ ನನ್ನ ಬಗ್ಗೆ ನನಗೆ ನಾಚಿಕೆ ಅನಿಸುತ್ತಿತ್ತು’ ಎಂದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments