Monday, June 23, 2025
26.3 C
Bengaluru
Google search engine
LIVE
ಮನೆರಾಜಕೀಯಪಾಕಿಸ್ತಾನವನ್ನ ಭೂಪಟದಿಂದ ಮುಕ್ತ ಗೊಳಿಸಬೇಕು: ಶಾಸಕ ರಾಜು ಕಾಗೆ ವಾಗ್ದಾಳಿ

ಪಾಕಿಸ್ತಾನವನ್ನ ಭೂಪಟದಿಂದ ಮುಕ್ತ ಗೊಳಿಸಬೇಕು: ಶಾಸಕ ರಾಜು ಕಾಗೆ ವಾಗ್ದಾಳಿ

ಬೆಳಗಾವಿ : ಪಾಕಿಸ್ತಾನವನ್ನು ಭೂಪಟದಿಂದಲೇ ಮುಕ್ತಗೊಳಿಸಬೇಕು. ಪಹಲ್ಗಾಂ ದಾಳಿ ಹಿನ್ನೆಲೆ ಪಾಕ್ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಜಮ್ಮುಕಾಶ್ಮೀರದದ ಪಹಲ್​ಗಾಮ್​ನಲ್ಲಿ ಉಗ್ರಗಾಮಿಗಳ ಅಟ್ಟಹಾಸಕ್ಕೆ ಸುಮಾರು 28 ಜನರು ಅಸು ನೀಗಿದ್ದು, ಇದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಪಾಕಿಸ್ತಾನ ಮೇಲಿಂದ ಮೇಲೆ ಭಾರತಿಯರ ಸಹನೆಯನ್ನ ಪರೀಕ್ಷಿಸುತ್ತಿದೆ.ಅವರ ಈ ದುಷ್ಕೃತ್ಯಕ್ಕೆ ಪಾಕಿಸ್ತಾನಕ್ಕೆ ನಮ್ಮ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುತ್ತಾರೆ.

ಈಗಾಗಲೇ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ರಾಜ ತಾಂತ್ರಿಕ ನಿಲುವುಗಳಿಂದಲೇ ಪಾಕಿಸ್ತಾನ ತತ್ತರಿಸಿ ಹೋಗಿದೆ. ಮನುಷ್ಯ ಮನುಷ್ಯರನ್ನು ಕೊಲ್ಲುವುದು ಎಷ್ಟು ಸರಿ ಆದ್ದರಿಂದ ನಾವೆಲ್ಲ ಭಾರತೀಯರು ಒಗ್ಗಟ್ಟಾಗಿ ಇರಬೇಕು ಇದರಲ್ಲಿ ರಾಜಕೀಯ ಮಾಡಬಾರದು.ಅವಶ್ಯಕತೆ ಬಿದ್ದಲ್ಲಿ ನಾವು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಸಿದ್ದರಾಗಬೇಕು ಎಂದರು.

ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಶಾಸಕ:

ಉಗ್ರರ ದಾಳಿ ಹಿನ್ನೆಲೆ ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ದೇಶದಲ್ಲಿ ಸುದ್ದಿಯಾಗಿತ್ತು. ಅವರ ಈ ಮಾತಿನಿಂದ ಸಾಕಷ್ಟು ಭಾರತೀಯರು ಅವರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು ಇದನ್ನು ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ ನಾನು ಹಾಗೆ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದರು.

ಇದೇ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಮಾತನಾಡಿದ್ದು ಅದು ಸಿಎಂ ಟಂಗ್ ಸ್ಲಿಪ್​ನಿಂದ ಆದ ಮಾತು ಇದನ್ನು ಯಾರು ತಿರುಚುವ ಅವಶ್ಯಕತೆ ಇಲ್ಲ ನಾವೆಲ್ಲ ಭಾರತೀಯರು. ಉಗ್ರರ ಅಟ್ಟಹಾಸದಲ್ಲಿ ಮಡಿದ 28 ಜನ ಭಾರತೀಯರು ನಮ್ಮವರೇ, ನಮ್ಮ ಕುಟುಂಬ ಸದಸ್ಯರಿಗೆ ಈ ರೀತಿಯ ಗೆದ್ದರೆ ಯಾರು ಸಹಿಸುತ್ತಿರಲಿಲ್ಲ ಸಿಎಂ ಕೂಡ ಭಾರತೀಯರೇ ಅವರು ಬಾಯಿ ತಪ್ಪಿ ಅಂದ ಮಾತಿನಿಂದ ಎಲ್ಲಾ ಅವಾಂತರಗಳಾಗಿವೆ ಅದನ್ನ ಚರ್ಚಿಸುವ ಅವಶ್ಯಕತೆ ಇಲ್ಲ ಎಂದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments