ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪೊಲೀಸ್ ಮಹಾ ನಿರ್ದೇಶಕ ಡಾ ಎಂ ಎ ಸಲೀಂ ಚಾಲನೆ ನೀಡಿದ್ದಾರೆ.
ಇನ್ಮುಂದೆ ಪ್ರಚೋದನಾ ಭಾಷಣ ಮಾಡಿದ್ರೆ, ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ, ಎಫ್ಐಆರ್ ಹಾಕಿ ಅರೆಸ್ಟ್ ಮಾಡುವುಕ್ಕೆ ಪೊಲೀಸರಿಗೆ ವಿಶೇಷ ಅಧಿಕಾರ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು. ಇದಕ್ಕಾಗಿ ಎಸ್ಎಎಫ್ ರಚನೆ ಮಾಡಿದ್ದೇವೆ.. ಕೋಮು ನಿಗ್ರಹ ಕಾರ್ಯಪಡೆ ಇಡೀ ದೇಶದಲ್ಲೇ ಮೊದಲ ಕಾರ್ಯಪಡೆ ಎಂದು
ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಚಾಲನೆಗೆ ಮುನ್ನ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಸರಣಿ ಸಭೆ ನಡೆಸಿದ್ರು. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ರು. ಈ ವೇಳೆ, ವಿವಿಧ ಸಂಘಟನೆಗಳ ಮುಖಂಡರು, ಗೃಹ ಸಚಿವ ಪರಮೇಶ್ವರ್ ಭೇಟಿಯಾಗಿ ಮನವಿ ಸಲ್ಲಿಸಿದ್ರು.
ವಿಶೇಷ ಕಾರ್ಯಪಡೆಯಿಂದ ಇನ್ಮುಂದೆ ಕರಾವಳಿಯಲ್ಲಿ ಶಾಂತಿ ನೆಲೆಸಲಿದೆ ಎನ್ನುವ ಆಶಾಭಾವನೆ ಸ್ಥಳೀಯರಲ್ಲಿ ಮೂಡಿದೆ