Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsತಾಯಿಯನ್ನು ನೋಡಿ ಭಾವುಕರಾದ ಪವಿತ್ರಾ ಗೌಡ

ತಾಯಿಯನ್ನು ನೋಡಿ ಭಾವುಕರಾದ ಪವಿತ್ರಾ ಗೌಡ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ. ಇದೇ ವೇಳೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ ಎ1 ಆರೋಪಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಹೈಕೋರ್ಟ್​ನಿಂದ ಬೇಲ್​ ಸಿಕ್ಕಿ 4 ದಿನ ಕಳೆದರೂ ಪವಿತ್ರಾಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಆದರೆ ಇಂದು ಬೆಳಗ್ಗೆ ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬೆನ್ನಲ್ಲೇ ಪವಿತ್ರಾಗೌಡ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಜೈಲಿನಿಂದ ಹೊರ ಬಳಿಕ ತಮ್ಮ ತಾಯಿಯವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದಕ್ಕೂ ಮೊದಲು ಅವರ ತಾಯಿ ಜೈಲಿನ ಬಳಿ ಇರುವ ಮುನೇಶ್ವರ ದೇವಾಲಯದಲ್ಲಿ ಅವಸರಲ್ಲಿಯೇ ಪೂಜೆ ಸಲ್ಲಿಸಿದರು. ದೇವರಿಗೆ ಹೂವಿನ ಹಾರ, ನಿಂಬೆಹಣ್ಣಿನ ಹಾರ ಹಾಕಿ, ಆಗರಬತ್ತಿ ಬೆಳಗಿ ನಮಸ್ಕಾರ ಮಾಡಿದರು. ಮುನೇಶ್ವರನಿಗೆ ಪೂಜೆ ಮಾಡಿದ ಬಳಿಕ ತಾಯಿ ಬಳಿಗೆ ಬಂದು ಪವಿತ್ರಾ ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದರು. ಬಳಿಕ ಜೈಲಿನಲ್ಲಿ ಕೆಲ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವರನ್ನು ಉಳಿಸಿ ಇನ್ನು ಕೆಲವರನ್ನು ರಾಜ್ಯದ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತ ಮಾಡಲಾಗಿತ್ತು. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು. ಕೆಲ ತಿಂಗಳುಗಳ ಬಳಿಕ ವೈದ್ಯಕೀಯ ಜಾಮೀನು ಪಡೆದು ದರ್ಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಈಗ ದರ್ಶನ್​ ಅವರಿಗೆ ಪೂರ್ಣವಧಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇನ್ನು ಪವಿತ್ರಾ ಗೌಡ ಇಂದು ರಿಲೀಸ್ ಆಗಿದ್ದಾರೆ. ಪವಿತ್ರಾ ಗೌಡ ಜೂನ್ 11 ರಂದು ಪೊಲೀಸರು ಬಂಧಿಸಿದ್ದರು. ನಂತರ ಕೋರ್ಟ್​ ಆದೇಶದಂತೆ ಜೂನ್ 20 ರಂದು ಜೈಲು ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಬರೋಬ್ಬರಿ 6 ತಿಂಗಳ ಬಳಿಕ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ ಆಗುತ್ತಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments