Thursday, November 20, 2025
27.5 C
Bengaluru
Google search engine
LIVE
ಮನೆ#Exclusive Newsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಪಾತ್ರ ಇಲ್ಲ : ವಕಿಲೆ ಶಿಲ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಪಾತ್ರ ಇಲ್ಲ : ವಕಿಲೆ ಶಿಲ್ಪಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು  ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್​ಗೂ ಸಹ ಜಾಮೀನು ದೊರೆತಿದೆ. ದರ್ಶನ್​ ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಆದರೆ ಪವಿತ್ರಾ ಗೌಡ ಕಳೆದ ಆರು ತಿಂಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ.

ಪವಿತ್ರಾಗೌಡ ಪರವಾಗಿ ಹಿರಿಯ ವಕೀಲರಾದ ಸೆಬಾಸ್ಟಿಯನ್ ಅವರು ವಾದ ಮಂಡಿಸಿದ್ದರು. ವಾದದ ವೇಳೆ ಪವಿತ್ರಾ ಗೌಡ ಸಿಂಗಲ್ ಪೇರೆಂಟ್, ಆಕೆ ಒಬ್ಬ ಮಹಿಳೆ ಎಂಬುದರ ಜೊತೆಗೆ ಪ್ರಕರಣದಲ್ಲಿ ಅವರ ಪಾತ್ರ ಇರಲಿಲ್ಲವೆಂದು. ಅಪಹರಣಕ್ಕಾಗಲಿ ಕೊಲೆಗಾಗಲಿ ಅವರು ಕುಮ್ಮಕ್ಕು ನೀಡಿರಲಿಲ್ಲ ಎಂದು ವಾದಿಸಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ವಕೀಲೆ ಶಿಲ್ಪಾ, ‘ಪವಿತ್ರಾ ಅವರು ಸಿಂಗಲ್ ಪೇರೆಂಟ್ ಅಥವಾ ಮಹಿಳೆ ಎಂಬ ಅಂಶವನ್ನು ನ್ಯಾಯಾಲಯ ಪರಿಗಣಿಸಿಲ್ಲ, ಬದಲಿಗೆ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಅವರಿಗೆ ಜಾಮೀನು ನೀಡಿದೆ’ ಎಂದಿದ್ದಾರೆ.

ನ್ಯಾಯಾಲಯವು ಏನೇನು ಷರತ್ತುಗಳನ್ನು ವಿಧಿಸಿದೆ ಎಂಬುದು ನಮಗೆ ಈಗ ತಿಳಿಯುವುದಿಲ್ಲ. ನ್ಯಾಯಾಲಯದ ಆದೇಶ ಬಂದ ನಂತರವೇ ಅದರ ಮಾಹಿತಿ ಲಭ್ಯ ಆಗಲಿದೆ ಎಂದ ವಕೀಲೆ ಶಿಲ್ಪಾ, ‘ಪವಿತ್ರಾ ಗೌಡ ಅವರು ಸೋಮವಾರದಂದು ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಪವಿತ್ರಾ ಗೌಡ ಅವರ ತಾಯಿ, ‘ಮಗಳಿಗೆ ಜಾಮೀನು ಸಿಕ್ಕಿರುವುದು ಬಹಳ ಖುಷಿಯಾಗಿದೆ’ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments