ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ ಬೀಳಲ್ಲ. ಈ ಅಬಕಾರಿ ತೆರಿಗೆಯನ್ನ ತೈಲ ಕಂಪನಿಗಳ ಮೇಲೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಣೆ ನೀಡಿದೆ. ಇದರಿಂದ ಜನ ಸಾಮಾನ್ಯರು ಆತಂಕಪಡಬೇಕಿಲ್ಲ ಎಂದು ಹೇಳಲಾಗಿದೆ.
ಪ್ರತಿ ಲೀಟರ್ಗೆ 2 ರೂಪಾಯಿಯಂತೆ ಪ್ರೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮೊನ್ನೆ ಮೊನ್ನೆಯಷ್ಟೇ ಕರ್ನಾಟಕ ಸರ್ಕಾರ ಡಿಸೇಲ್ ಮೇಲೆ ಎರಡು ರೂಪಾಯಿ ಹೆಚ್ಚಳ ಮಾಡಿತ್ತು. ಇದೀಗ ಸರ್ಕಾರ ಏಪ್ರಿಲ್ 7 ರಂದು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ತಲಾ 2 ರೂಪಾಯಿ ಹೆಚ್ಚಿಸಿದೆ. ಜಾಗತಿಕ ತೈಲ ಬೆಲೆಗಳಲ್ಲಿನ ಏರಿಳಿತಗಳಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಎರಡು ರೂಪಾಯಿ ಡೀಸೆಲ್ ಬೇಲೆ ಏರಿಕೆ ಮಾಡಿತ್ತು. ಈ ದರ ಏರಿಕೆಗೆ ಲಾರಿ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ದರ ಹೆಚ್ಚಳವನ್ನು ವಿರೋಧಿಸಿ ಲಾರಿ ಮಾಲೀಕರ ಸಂಘ ಇದೇ ಏಪ್ರಿಲ್ 14 ರಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.