Wednesday, January 28, 2026
23.8 C
Bengaluru
Google search engine
LIVE
ಮನೆ#Exclusive Newsಪಾಂಡವಪುರದಲ್ಲಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ: ಪೋಲಿಸರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಪಾಂಡವಪುರದಲ್ಲಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ: ಪೋಲಿಸರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯದ ಪಾಂಡವಪುರದಲ್ಲಿ ಶೂ ಧರಿಸಿಕೊಂಡೇ ಪೊಲೀಸರು ಆರ್​ಎಸ್​ಎಸ್​​ ಕಚೇರಿಗೆ ನುಗ್ಗಿದ್ದಾರೆ. ನಾವು ಕಚೇರಿಯನ್ನೂ ದೇವಾಲಯ ಎಂದೇ ಭಾವಿಸುತ್ತೇವೆ. ನಮ್ಮ ಭಾವನೆಗೆ ಧಕ್ಕೆಯಾಗಿದೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಾಂಡವಪುರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ, ಸೆಪ್ಟೆಂಬರ್ 16: ಮಂಡ್ಯ ಜಿಲ್ಲೆಯ ಪಾಂಡವಪುರ ಆರ್‌ಎಸ್‌ಎಸ್ ಕಚೇರಿಗೆ ಪೊಲೀಸರು ದಾಳಿ ಮಾಡಿದ್ದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರು ಆರ್‌ಎಸ್‌ಎಸ್ ಕಚೇರಿಗೆ ದಾಳಿ ಮಾಡಿದ್ದಷ್ಟೇ ಅಲ್ಲದೆ, ಶೂ ಹಾಕಿಕೊಂಡೇ ಕಚೇರಿ ಒಳ ಪ್ರವೇಶಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು, ಡಿವೈಎಸ್‌ಪಿ ಹಾಗೂ ಇನ್ಸ್​​ಪೆಕ್ಟರ್ ಇಬ್ಬರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಾಂಡವಪುರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ನಿನ್ನೆ ಪಾಂಡವಪುರದ ಆರ್‌ಎಸ್‌ಎಸ್ ಕಚೇರಿಗೆ ಬಜರಂಗದಳ, ವಿಹೆಚ್​​ಪಿ ಮುಖಂಡರ ಬಂಧನಕ್ಕೆ‌ ತೆರಳಿದ್ದ ಪೊಲೀಸರು ಶೂ ಧರಿಸಿಕೊಂಡೇ ಕಚೇರಿಯಲ್ಲಿ‌ ಓಡಾಡಿದ್ದಾರೆ. ನಾವು ನಮ್ಮ ಕಚೇರಿಯನ್ನು ದೇವಸ್ಥಾನ ಎಂದುಕೊಂಡಿದ್ದೇವೆ. ನಮ್ಮ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ. ಡಿವೈಎಸ್‌ಪಿ ಹಾಗೂ ಇನ್ಸ್​​​ಪೆಕ್ಟರ್ ಇಬ್ಬರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments