Wednesday, April 30, 2025
24 C
Bengaluru
LIVE
ಮನೆ#Exclusive Newsನಾಪತ್ತೆ ಆಗಿರುವ ನಟ ಧರ್ಮೇಂದ್ರಗಾಗಿ ಪೊಲೀಸರ ಶೋಧ

ನಾಪತ್ತೆ ಆಗಿರುವ ನಟ ಧರ್ಮೇಂದ್ರಗಾಗಿ ಪೊಲೀಸರ ಶೋಧ

ವಾರಾಹಿ ಗೋಲ್ಡ್‌ನ ಕೋಟಿ, ಕೋಟಿ ವಂಚನೆ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದ್ದಂತೆ ಪ್ರಕರಣದ ಮೂವರು ಆರೋಪಿಗಳು ನಾಪತ್ತೆಯಾಗಿದ್ದರು. ಅದರಲ್ಲಿ ಐಶ್ವರ್ಯ ಗೌಡ, ಪತಿ ಹರೀಶ್ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಆದ್ರೆ ಡಿ.ಕೆ ಸುರೇಶ್​ ಧ್ವನಿಯಲ್ಲಿ ಮಾತನಾಡಿ ಟೋಪಿ ಹಾಕಿದ್ದ ನಟ ಧರ್ಮೇಂದ್ರ ನಾಪತ್ತೆ ಆಗಿದ್ದಾನೆ. ಮೊಬೈಲ್​ ಕೂಡ ಸ್ವಿಚ್​ ಆಫ್​ ಮಾಡಿಕೊಂಡಿದ್ದಾರೆ. ಸದ್ಯ ನಟ ಧರ್ಮೇಂದ್ರಗೆ ಪೊಲೀಸರು ನೋಟಿಸ್ ನೀಡಿದ್ದು ಶೋಧಕಾರ್ಯ ಮುಂದುವರೆಸಿದ್ದಾರೆ.

ಈ ಮಧ್ಯೆ 14 ಕೆ.ಜಿ ‘ಚಿನ್ನ’ ದೋಖಾ ಕೇಸ್​ನಲ್ಲಿ ತಮ್ಮ ಹೆಸರು ಬಂದಿರುವ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿ.ಕೆ ಸುರೇಶ್, ನನ್ನ ಹೆಸರನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಕ್ರಮ ಕೈಗೊಳ್ಳುವಂತೆ ದೂರು ಕೊಡುತ್ತೇನೆ. ಕಮಿಷನರ್​ಗೂ ಪತ್ರ ಬರೆಯುತ್ತೇನೆ ಅಂತ ಎಚ್ಚರಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments