Wednesday, January 28, 2026
20.2 C
Bengaluru
Google search engine
LIVE
ಮನೆರಾಜಕೀಯಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ ನಡೆಯಿತು. ಆ ಕಾರ್ಯಕ್ರಮದಲ್ಲಿ ಬಿಜೆಪಿಯ ಕೊಡುಗೆಗಳ ಬಗ್ಗೆ ಪಿ.ಸಿ.ಮೋಹನ್ ಹೋಗಳಿದ್ದಾರೆ. ಇದಕ್ಕೆ ಪ್ರದಿಪ್ ಈಶ್ವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದೆ.

ಈ ಗಲಾಟೆ ಬಗ್ಗೆ ಬಿಜೆಪಿಯು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರನ್ನ ‘ಆಕ್ಸಿಡೆಂಟಲ್ ಎಂಎಲ್ಎ’ ಎಂದು ಟೀಕೆ ಮಾಡಿದ್ದಾರೆ.

ಆಕ್ಸಿಡೆಂಟಲ್ ಎಂ.ಎಲ್.ಎ ಪ್ರದೀಪ್ ಈಶ್ವರ್ ಅವರೇ, ಅಲ್ಲಿ ನಡೆಯುತ್ತಿರುವುದು ಬಿಜೆಪಿ ಕಾರ್ಯಕ್ರಮವೂ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮವೂ ಅಲ್ಲ. ಅಲ್ಲಿ ನಡೆಯುತ್ತಿರುವುದು ಪವಾಡ ಪುರುಷ ಕೈವಾರ ತಾತಯ್ಯ ಅವರ ಜಯಂತಿ ಕಾರ್ಯಕ್ರಮ ನಿಮಗೆ ಅಷ್ಟೊಂದು ಪ್ರಚಾರದ ಗೀಳಿದ್ದರೆ ಮಜಾ ಟಾಕೀಸ್ ಅಥವಾ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಹೋಗಿ. ನಿಮ್ಮ ಪ್ರಚಾರದ ಹಪಾಹಪಿಗಾಗಿ ಪೂಜನೀಯ ಕೈವಾರ ತಾತಯ್ಯ ಅವರ ವೇದಿಕೆಗೆ ಅವಮಾನಿಸಬೇಡಿ ಎಂದು ಬಿಜೆಪಿ ಕಿಡಿಕಾರಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments