ಹಾಸನ: ಅತ್ಯಾಚರ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುತ್ತಾರೆ. ಅವರು ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದು ಹೇಳಿದ್ದಾರೆ.