Wednesday, August 20, 2025
18.9 C
Bengaluru
Google search engine
LIVE
ಮನೆ#Exclusive NewsTop Newsಪ್ರಣವ್​ ಮೊಹಾಂತಿ ಕೇಂದ್ರಕ್ಕೆ ಕಳುಹಿಸುವ ತೀರ್ಮಾನ ಕೈಗೊಂಡಿಲ್ಲ - ಡಾ.ಜಿ ಪರಮೇಶ್ವರ್​​

ಪ್ರಣವ್​ ಮೊಹಾಂತಿ ಕೇಂದ್ರಕ್ಕೆ ಕಳುಹಿಸುವ ತೀರ್ಮಾನ ಕೈಗೊಂಡಿಲ್ಲ – ಡಾ.ಜಿ ಪರಮೇಶ್ವರ್​​

ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್​ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್​ಐಟಿ ಮುಖ್ಯಸ್ಥರಾಗಿರುವ ಪ್ರಣವ್​ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಕಹಿಸಲು ಸರ್ಕಾರ ನಿರ್ಧರಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟಿಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಗಳನ್ನು ಎಸ್​ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂಬ ಕಾರಣದಿಂದ ಸರ್ಕಾರ ಪ್ರಣವ್​ ಮೊಹಾಂತಿ ಅವರನ್ನು ನೇಮಕ ಮಾಡಿದೆ.ಕೇಂದ್ರದ ಡೆಪ್ಯೂಟೇಷನ್​ ಪಟ್ಟಿಯಲ್ಲಿ ಅವರ ಹೆಸರಿದೆ ಅವರನ್ನು ಕೇಂದ್ರ ಸೇವೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ರು.

ಧರ್ಮಸ್ಥಳ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದು ಸರಿ ಕಾಣುವುದಿಲ್ಲ. ಧರ್ಮಸ್ಥಳ ಪ್ರಕರಣದ ಸತ್ಯಾಂಶ ಹೊರಬರಬೇಕು ಎಂದು ಎಸ್​ಐಟಿ ತನಿಖೆಗೆ ನೀಡಿದ್ದೇವೆ. ಎಸ್​ಐಟಿ ತನಿಖೆ ನಡೆಸಿ ವರದಿ ಸಲ್ಲಿಸಿದ ಬಳಿಕ ಸತ್ಯಾಂಶ ಹೊರಗೆ ಬರಲಿದೆ. ನಮಗೆ ಬೇಕಾಗಿರುವುದು ಅದೇ ಎಂದು ಹೇಳಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ಉಳಿಸುವ ಪ್ರಶ್ನೆಯೂ ಇಲ್ಲ. ಯಾರನ್ನು ಸಿಕ್ಕಿಹಾಕಬೇಕು ಎಂದು ಸರ್ಕಾರಕ್ಕೆ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments