Tuesday, January 27, 2026
24.7 C
Bengaluru
Google search engine
LIVE
ಮನೆರಾಜ್ಯರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ

ಬೆಂಗಳೂರು: ರಾಜ್ಯದ ಜನರಿಗೆ ಕಳೆದ ಕೆಲವು ತಿಂಗಳಿಂದ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಅತ್ತ ಮೆಟ್ರೋ ಪ್ರಯಾಣ ದರ, ಬಸ್‌ ಪ್ರಯಾಣ ದರ ಹೀಗೆ ದರ ಏರಿಕೆ ಘೋಷಣೆ ಮಾಡಿ ಸರ್ಕಾರ ಗಾಯದ ಮೇಲೆ ಬರೆ ಎರೆಯುತ್ತಲೇ ಇದೆ. ಹಲವು ಚರ್ಚೆ, ಬೇಡಿಕೆಗಳ ನಡುವೆ ಕೊನೆಗೂ ಸರ್ಕಾರ ಹಾಲು ಮತ್ತು ವಿದ್ಯುತ್‌ ದರವನ್ನು ಏರಿಕೆ ಮಾಡಿತ್ತು.ಇದೀಗ ಈ ಮಧ್ಯೆ ಮತ್ತೆ ಸಿಟಿ ಜನರಿಗೆ ಮತ್ತೊಂದು ದರ ಏರಿಕೆ ಬಿಸಿ ತಟ್ಟಲಿದೆ. ಹಾಲು, ಟೀ, ಕಾಫಿ ನಂತ್ರ‌ ಇದೀಗ ಹೋಟೆಲ್‌ನಲ್ಲಿ‌ ಸಿಗುವ ತಿಂಡಿಗಳ ದರ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಡ್ಲಿ, ದೋಸೆ, ತುಪ್ಪ, ಮಜ್ಜಿಗೆ ಸೇರಿದಂತೆ ಸಿಹಿ ತಿಂಡಿಗಳ ದರ ಏರಿಕೆ ಮಾಡುವುದಾಗಿ ವರದಿಯಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ 1 ರಿಂದ 2 ರೂಪಾಯಿ ಏರಿಕೆ ಆಗಲಿದೆ. ಈಗಾಗಲೇ ದರ ಅಂತಿಮ ಪಟ್ಟಿಯನ್ನು ಸಿದ್ದ ಪಡಿಸುತ್ತಿರುವ ಹೋಟೆಲ್ ಮಾಲೀಕರು ಇನ್ನೇನು ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments