Thursday, November 20, 2025
19.9 C
Bengaluru
Google search engine
LIVE
ಮನೆ#Exclusive NewsTop Newsಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ

ಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ

ಬೆಂಗಳೂರು: ಬಿಗ್​ ಬಾಸ್​ ಕನ್ನಡ ಸೀಜನ್​​​​​-12 ಶೋನಡೆಯುತ್ತಿರುವ ಜಾಲಿವುಡ್​​​ ಸ್ಟುಡಿಯೊಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದು, ಸರ್ಕಾರ ಕೊನೆಗೆ ಸಂಸ್ಥೆಯ ಮನವಿ ಮೇರೆಗೆ ಶೋ ಮುಂದುವರಿಸಲು ಅವಕಾಶ ನೀಡಿದೆ..

ಈ ಹಿನ್ನೆಲೆ ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋ ಗೇಟ್ ಬಳಿ ಜಮಾಯಿಸಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಸರ್ಕಾರದ ಈ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾತ್ರೋರಾತ್ರಿ ಯಾವ ಆಧಾರದ ಮೇಲೆ ಬಿಗ್ ಬಾಸ್‌ಗೆ ಅನುಮತಿ ನೀಡಲಾಗಿದೆ? ಎಂದು ಅವರು ಪ್ರಶ್ನಿಸಿದ್ದಾರೆ. ಸ್ಟುಡಿಯೋ ಆಡಳಿತವು ಪರಿಸರ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪವಿದೆ, ಈ ಅನುಮತಿಯನ್ನು ಅಕ್ರಮವೆಂದು ಕರೆದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಾಲಿವುಡ್ ಸ್ಟುಡಿಯೋ ಗೇಟ್ ತೆರೆಯುತ್ತಿದ್ದಂತೆ ಬಿಗ್ ಬಾಸ್ ಮನೆಯನ್ನೂ ಮತ್ತೆ ತೆರೆಯಲಾಗಿದೆ. ಸ್ಪರ್ಧಿಗಳು ಒಳಗೆ ಆಗಮಿಸಿ, ಶೂಟಿಂಗ್‌ನಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿವೆ. ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ಈ ಶೋ ನಡೆಯುತ್ತಿದೆ. ಸರ್ಕಾರ ಈ ರೀತಿಯ ಕಾರ್ಯಕ್ರಮಗಳಿಗೆ ಒತ್ತಡಕ್ಕೆ ಮಣಿದು ಅನುಮತಿ ನೀಡಿರುವುದು ಸರಿಯಲ್ಲ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಆರೋಪಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments