ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.
ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ. ಸಂಜಯ್ ಗೌಡ, ನ್ಯಾ. ನಟರಾಜನ್, ನ್ಯಾ. ಹೇಮಂತ್ ಚಂದನ್ ಗೌಡರ್ ವರ್ಗಾವಣೆ ವಿರೋಧಿಸಿ ಹೈಕೋರ್ಟ್ ಪದಾಂಕಿತ ಹಿರಿಯ ಹಾಗೂ ಎಲ್ಲ ವಕೀಲರು ಕೋರ್ಟ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.
ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಮಧ್ಯಾಹ್ನ 1:30ಕ್ಕೆ ಬೆಂಗಳೂರು ವಕೀಲರ ಸಂಘದಿಂದ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ.