ನವದೆಹಲಿ : ದಿ. ಮನಮೋಹನ್ ಸಿಂಗ್ ವಿಚಾರವಾಗಿ ಪರಸ್ಪರ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿ ವಿಸರ್ಜನೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಯಾರೋಬ್ಬರರು ಹಾಜರಾಗದೇ ಇದ್ದುದನ್ನು ಉಲ್ಲೇಖಿಸಿದ ಬಿಜೆಪಿ, ಗಾಂಧಿ ಪರಿವಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಇಡೀ ದೇಶವೇ 7 ದಿನಗಳ ಶೋಕಾಚರಣೆ ನಡೆಸುವಾಗ ರಾಹುಲ್ ಗಾಂಧಿ ಮಾತ್ರ ಹೊಸ ವರ್ಷದ ಆಚರಣೆಗಾಗಿ ವಿಯೆಟ್ನಾಂ ಪ್ರವಾಸ ಕೈಗೊಂಡಿದ್ದಾರೆ. ಈ ಮೂಲಕ ಮನಮೋಹನ್ಸಿಂಗ್ ಅವರಿಗೆ ರಾಹುಲ್ ಗಾಂಧಿ ಪದೇ ಪದೇ ಅವಮಾನ ಮಾಡ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.