Top Newsರಾಜಕೀಯ

ರಾಹುಲ್​ ಗಾಂಧಿಯನ್ನು ಮೆಚ್ಚಿಸಲು ರಾಜಣ್ಣ ತಲೆದಂಡ; ಜೆಡಿಎಸ್​​

ಬೆಂಗಳೂರು: ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್​ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ತಲೆದಂಡ ಮಾಡಲಾಗಿದೆ ಎಂದು ಜೆಡಿಎಸ್​ ಟೀಕಿಸಿದೆ.

ಸಹಕಾರ ಸಚಿವ ಕೆ.ಎನ್​ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಜೆಡಿಎಸ್​ ಅಹಿಂದ.. ಅಹಿಂದ.. ಎನ್ನುತ್ತಲೇ ಹಿಂದುಳಿದ ದಲಿತ ನಾಯಕರನ್ನು ತುಳಿಯುತ್ತಿರುವ ಮಜವಾದಿ ಸಿಎಂ ಸಿದ್ದರಾಮಯ್ಯ ನಿಮ್ಮ ಅಧಿಕಾರದ ದುರಾಸೆಗೆ ವಾಲ್ಮೀಕಿ ಸಮುದಾಯದ ಮತ್ತೊಬ್ಬ ದಲಿತ ನಾಯಕನನ್ನು ಬಲಿಕೊಟ್ಟಿದ್ದೀರಿ.ಪರಮಾಪ್ತ ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿದ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದೆ.

ಈ ಹಿಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಲೂಟಿ ಹೊಡೆದು ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಬಳಸಿಕೊಂಡು, ಬಿ. ನಾಗೇಂದ್ರ ಅವರನ್ನು ಬಲಿಪಶು ಮಾಡಿ ಜೈಲಿಗೆ ಅಟ್ಟಿದಿರಿ. ಹಿಂದುಳಿದ ವರ್ಗಗಳ ನೇತಾರ ದಿ.ದೇವರಾಜ್‌ ಅರಸು ಅವರ ದಾಖಲೆಯನ್ನು ಮುರಿಯಬೇಕು ಎಂಬ ಹಪಾಹಪಿಯಲ್ಲಿರುವ ಸಿದ್ದರಾಮಯ್ಯ, ದಲಿತ ನಾಯಕರಿಗೆ ಚೂರಿ ಹಾಕಲು ಹಿಂಜರಿಯುವುದಿಲ್ಲ ಎಂಬುದಕ್ಕೆ ರಾಜಣ್ಣಗೆ ಆಗಿರುವ ಈ ಘೋರ ಅನ್ಯಾಯವೇ ಸಾಕ್ಷಿ.

ರಾಜಣ್ಣ ಮಾಡಿದ ಅಪರಾಧವಾದರೂ ಏನು ? ಸಿದ್ದರಾಮಯ್ಯ ಅವರೇ, ದಲಿತ ಸಮುದಾಯಕ್ಕೆ ವಂಚಿಸಿ ಅಧಿಕಾರದಲ್ಲಿ ಮುಂದುವರಿಯಲು ನಿಮ್ಮ ಆತ್ಮಸಾಕ್ಷಿಯಾದರೂ ಹೇಗೆ ಒಪ್ಪುತ್ತದೆ ? ಎಂದು ಜೆಡಿಎಸ್​ ಪ್ರಶ್ನೆ ಮಾಡಿದೆ.

Comments (0)

Your email address will not be published. Required fields are marked *

Back to top button