Top Newsರಾಜಕೀಯ

ರಾಜಣ್ಣಗೆ ಆಗಸ್ಟ್ ನಲ್ಲೇ ಶಾಕ್​..! ಹೈಕಮಾಂಡ್​ ಸೂಚನೆ ಮೇರೆಗೆ ರಾಜಣ್ಣ ರಾಜೀನಾಮೆ

ಬೆಂಗಳೂರು: ಸಹಕಾರ ಸಚಿವ ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಇನ್ನು ಸಹಕಾರ ಸಚಿವ ಕೆ.ಎನ್​ ರಾಜಣ್ಣ ರಾಜೀನಾಮೆ ಬಗ್ಗೆ ಫ್ರೀಡಂ ಟಿವಿ ಬೆಳಗ್ಗೆಯೇ ವರದಿಯನ್ನು ಬಿತ್ತರಿಸಿತ್ತು. ಇದೀಗ ಸಚಿವ ಕೆ.ಎನ್​ ರಾಜಣ್ಣ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಾಯಕತ್ವ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್​ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಯನ್ನು ಕೆ.ಎನ್​ ರಾಜಣ್ಣ ನೀಡುತ್ತಿದ್ದರು. ಈ ಹಿನ್ನೆಲೆ ಹೈಕಮಾಂಡ್​ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್​ ಕ್ರಾಂತಿ ನಡೆಯಲಿದೆ ಎಂದು ಕೆ.ಎನ್​ ರಾಜಣ್ಣ ಹೇಳಿದ್ದರು. ಅಷ್ಟೇ ಅಲ್ಲದೇ  ಪಕ್ಷದಲ್ಲಿ ಹಿರಿಯ ನಾಯಕರ ಎಚ್ಚರಿಕೆಯ ಹೊರತಾಗಿಯೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರವಾಗಿ ಪದೇ ಪದೇ ಮಾತನಾಡುತ್ತಿದ್ದು ಹೈಕಮಾಂಡ್​ ಕೆಂಗಣ್ಣಿಗೆ ಕೂಡಾ ಗುರಿಯಾಗಿದ್ದರು.

ಇದೀಗ ಲೋಕಸಭೆ ಚುನಾವಣೆ ವೇಳೆ ಬೆಂಗಳೂರಿನ ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ಸೇರಿದಂತೆ ದೇಶದ ಹಲವು ಕಡೆ ಮತಗಳ್ಳತನ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಆರೋಪದ ಬಗ್ಗೆ ಚರ್ಚೆಯಾಗುತ್ತಿದ್ದಾಗ ರಾಜಣ್ಣ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಕಾಂಗ್ರೆಸ್​ ಅಧಿಕಾರಾವಧಿಯಲ್ಲೇ ಚುನಾವಣೆ ಮತದಾನದಲ್ಲಿ ಅಕ್ರಮವಾಗಿದೆ ಎನ್ನುವ ಮೂಲಕ ಮುಖಭಂಗ ಉಂಟು ಮಾಡಿದ್ದರು.

Comments (0)

Your email address will not be published. Required fields are marked *

Back to top button