ರಾಜ್ಕುಮಾರ್ ಅವರು ‘ಯಾರೇ ಕೂಗಾಡಲಿ..’ ಹಾಡನ್ನು ಹಾಡಿದ್ದರು. ಈ ಹಾಡನ್ನು ರಾಜ್ಕುಮಾರ್ ಅವರ ಬಳಿ ಹಾಡಿಸೋ ಆಲೋಚನೆ ಯಾರಿಗೂ ಇರಲಿಲ್ಲ. ಈ ಆಲೋಚನೆ ಮೊದಲು ಬಂದಿದ್ದು ಇಳಯರಾಜ ಹಾಗೂ ಜಿಕೆ ವೆಂಕಟೇಶ್ ಅವರಿಗೆ.
ರಾಜ್ಕುಮಾರ್ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅವರು ಮೊದಲ ಹಾಡಿದ್ದು ಎಂದರೆ ಅದು ‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ..’ ಹಾಡನ್ನು. ರಾಜ್ಕುಮಾರ್ ಅವರು ಗಾಯಕ ಆಗಲು ಕಾರಣವಾಗಿದ್ದು ಇಳಯರಾಜ ಅವರು ಅನ್ನೋದು ವಿಶೇಷ. ಈ ಬಗ್ಗೆ ಇಳಯರಾಜ ಇತ್ತೀಚೆಗೆ ಹೇಳಿಕೊಂಡಿದ್ದರು. ಮೈಸೂರು ದಸರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು.
‘ಸಂಪತ್ತಿಗೆ ಸವಾಲ್’ ಚಿತ್ರಕ್ಕೆ ಜಿಕೆ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದರು. ನಾನು ಅವರಿಗೆ ಸಹಾಯಕನಾಗಿದ್ದೆ. ಆಗ ರಾಜ್ಕುಮಾರ್ ಸಿನಿಮಾಗಳು ಎಂದಾಗ ಪಿಬಿ ಶ್ರೀನಿವಾಸ್ ಹಾಡುತ್ತಿದ್ದರು. ಈ ಸಿನಿಮಾದ ಹಾಡನ್ನು ಹೊಸ ಧ್ವನಿ ಬೇಕು ಎಂದು ನಾನು ಜಿಕೆ ವೆಂಟಕೇಶ್ ಹತ್ತಿರ ಹೇಳಿದೆ’ ಎಂದು ಅಂದಿನ ಘಟನೆ ವಿವರಿಸಿದರು ಇಳಯರಾಜ.