ಬೆಂಗಳೂರು: ನಾನು ಶೆಡ್ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.
ದರ್ಶನ್ ಹೇಳೋದು ಏನು?
ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ. ಹುಡುಗರ ಜೊತೆ ಮದ್ಯ ಹಾಕುತ್ತಿದ್ದಾಗ ಪವನ ಅಲ್ಲಿಗೆ ಬಂದಿದ್ದ. ನನ್ನ ಕಿವಿಯಲ್ಲಿ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ಹೇಳಿದ.
ನಾನು ಸೀದಾ ಅಲ್ಲಿಂದ ಮನೆಗೆ ಹೋಗಿ ಪವಿತ್ರಾಳನ್ನು ಕರೆದುಕೊಂಡು ಶೆಡ್ಗೆ ಹೋದೆ. ಅವನನ್ನು ಕೊಲೆ ಮಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ. ನಾಲ್ಕು ಹೊಡೆದು ಅವನ ಕೈಯಿಂದ ಸ್ವಾರಿ ಎಂದು ಹೇಳಿಸಬೇಕು ಅಂತ ಇದ್ದೆ.
ನನ್ನ ಪವಿತ್ರಾನ ನೋಡುತ್ತಿದ್ದಂತೆ ಅವನು ತಪ್ಪಾಯ್ತು ಅಂತ ಕೇಳಿಕೊಂಡ. ಆಮೇಲೆ ನಾನು ಅವನಿಗೆ ಅವನಿಗೆ ಊಟಕ್ಕೆ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರಿಗೆ ಹೋಗು ಅಂತ ಹೇಳಿ ಬಂದೆ. ನಾನು ಶೆಡ್ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ. ಅಷ್ಟೇ ಸರ್ ವಿಷಯ. ನನಗೆ ಬೇರೆ ಏನು ಗೊತ್ತಿಲ್ಲ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com