Tuesday, November 18, 2025
21.9 C
Bengaluru
Google search engine
LIVE
ಮನೆಜಿಲ್ಲೆರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್​​ ಮಾಡಿ ಹತ್ಯೆ..!

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್​​ ಮಾಡಿ ಹತ್ಯೆ..!

ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಕಲಬುರಗಿಯಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್​​ ಮಾಡಿದ್ದಕ್ಕೆ ದರ್ಶನ್​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಕಿಡ್ನಾಪ್​ ಮಾಡಿಕೊಂಡು ಬಂದು ಬೆಂಗಳೂರಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಅದೇ ರೀತಿ ಕಲಬುರಗಿಯಲ್ಲಿ ಕಿರುಕುಳ ನೀಡುತ್ತಿದ್ದಾನೆಂದು ರಾಘವೇಂದ್ರ ನಾಯಕ್ (39)​ ಎಂಬುವವನನ್ನು  ಮಾಜಿ ಪ್ರಿಯತಮೆ ಅಶ್ವಿನಿ ಅಲಿಯಾಸ್​​ ತನು & ಗ್ಯಾಂಗ್​​ ಕೊಲೆ ಮಾಡಿದೆ. ಅಶ್ವಿನಿ ಸಹಚರರಾದ ಗುರುರಾಜ್, ಲಕ್ಷ್ಮೀಕಾಂತ್ ಮಾರ್ಚ್​ 12 ರಂದು ರಾಘವೇಂದ್ರ ನಾಯಕ್​ ನನ್ನು ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾರೆ.

 

ಪ್ರೀತಿಸಿದ್ದಾಕೆ ಅಶ್ವಿನಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಾಜಿ ಲವರ್​​ಗೆ ಈಗಿನ ಲವರ್​​ ಕಿಡ್ನಾಪ್​ ಮಾಡಿ ಹಲ್ಲೆ ನಡೆಸಿದ್ದಾನೆ. ಕಲಬುರಗಿಯಿಂದ  ರಾಘವೇಂದ್ರನನ್ನು ಅಪಹರಿಸಿ ಕೀರ್ತಿ ನಗರದ ಸ್ಮಶಾನಕ್ಕೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ. ರಾಘವೇಂದ್ರ ನಾಯಕ್ ಮರ್ಮಾಂಗಕ್ಕೆ ಒದ್ದು ವಿಕೃತವಾಗಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಕಾರಿನಲ್ಲಿ ಹಾಕಿಕೊಂಡು ರಾಯಚೂರಿನ ಶಕ್ತಿ ನಗರದ ಬಳಿ ನದಿಗೆ ಬಿಸಾಕಿ ಎಸ್ಕೇಪ್​ ಆಗಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ  ಕಲಬುರಗಿಯಲ್ಲಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಪ್ರತಿಕ್ರಿಯಿಸಿದ್ದು, ಕಿಡ್ನ್ಯಾಪ್ ಕೇಸ್ ತನಿಖೆ ನಡೆಸಿದಾಗ ಕೊಲೆ ಎನ್ನುವುದು ಗೊತ್ತಾಗಿದೆ. ಮಾರ್ಚ್​ 12 ರಾಘವೇಂದ್ರ ಕಾಣೆಯಾಗಿದ್ದ. ಈ ಬಗ್ಗೆ ಆತನ ಪತ್ನಿ ದೂರು ನೀಡಿದ್ದಳು. ಕಿಡ್ನ್ಯಾಪ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದೆವು. ಈ ವೇಳೆ ಮೂವರು ಸೇರಿ ಕೊಲೆ ಮಾಡಿದ್ದು ಗೊತ್ತಾಗಿದೆ ಎಂದ್ರು.. ಇನ್ನು ಘಟನೆ ಸಂಬಂಧ ಸ್ಟೇಷನ್​ ಬಜಾರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಮೂರು ಜನ ಆರೋಪಿಗಳನ್ನ ಬಂಧಿಸಲಾಗಿದೆ ಎಂದ್ರು..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments