Monday, June 23, 2025
26.3 C
Bengaluru
Google search engine
LIVE
ಮನೆರಾಜಕೀಯರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್

ರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿವೈ ವಿಜಯೇಂದ್ರಗೆ ಸವಾಲು ಎಸೆದಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕೇವಲ ಹಿಂದೂತ್ವದ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್​ ಬೇಡ. ವಿಜಯೇಂದ್ರ ನಿನಗೆ ತಾಕತ್​ ಇದ್ಯಾ, ಚುನಾವಣೆಗೆ ರೆಡಿಯಿದ್ದೇನೆ. ಹಂದಿ ಕಡೆಯಿಂದ ನನ್ನ ವಿರುದ್ಧ ಮಾತನಾಡಿಸಬೇಡ ಎಂದು ಪರೋಕ್ಷವಾಗಿ ರೇಣುಕಾಚಾರ್ಯಗೆ ಬಸನಗೌಡ ಪಾಟೀಲ್​ ಯತ್ನಾಳ್ ಹಂದಿ ಎಂದಿದ್ದಾರೆ. ಕುಟುಂಬ ಮುಕ್ತ ಆದ ಮೇಲೆ ನಾನು ಬಿಜೆಪಿಗೆ ಹೋಗುತ್ತೇನೆ ಎಂದರು.

ಬಿಜೆಪಿ ಬಿಎಸ್ ಯಡಿಯೂರಪ್ಪ ಕುಟುಂಬದಿಂದ ಮುಕ್ತಿ ಆದ ಮೇಲೆ ಹೋಗುತ್ತೇನೆ. ಒಂದು ದಿನ ಹೋಗಲೆಬೇಕು. ನಾನು ಒಳ್ಳೆಯವನು,ದುಷ್ಟರಿಗೆ ನಾನು ದುಷ್ಟ. ಪಂಚಮಸಾಲಿ ಟ್ರಸ್ಟ್​ನ ಪ್ರಭಣ್ಣ ಮಠದ ಆಸ್ತಿಯನ್ನು ಹೊಡೆದಿದ್ದಾರೆ. ಕೂಡಲ ಸಂಗಮದ ಆಸ್ತಿಯನ್ನು ತನ್ನ ಕುಟುಂಬದ ಆಸ್ತಿ ಮಾಡಿಕೊಂಡಿದ್ದಾನೆ ಎಂದು ಏಕವಚನದಲ್ಲಿ ಏಗ್ದಾಳಿ ಮಾಡಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments