Wednesday, January 28, 2026
24.9 C
Bengaluru
Google search engine
LIVE
ಮನೆರಾಜಕೀಯಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಸಂಗಾರೆಡ್ಡಿ: ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್‌ಆರ್‌ನಲ್ಲಿ ಸಂಭವಿಸಿದ ಭಿಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಾಸಕಿಯ ನಿಧನಕ್ಕೆ ಬಿಆರ್​ಎಸ್ ನಾಯಕರು ಹಾಗೂ ತೆಲಂಗಾಣದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಆಕೆ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಸಿಕಂದರಾಬಾದ್​ನ ಕಂಟೋನ್ಮೆಂಟ್ ಶಾಸಕಿ ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.ಕಳೆದ ವರ್ಷ ಇದೇ ತಿಂಗಳಲ್ಲಿ ಆಕೆಯ ತಂದೆ ಸಾಯಣ್ಣ ಮೃತಪಟ್ಟಿದ್ದರು. ಸಾಯಣ್ಣ 2023 ರ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ಅವರ ಮಗಳು 2024 ರ ಫೆಬ್ರವರಿ 23 ರಂದು ನಿಧನರಾಗಿದ್ದಾರೆ. ಇದು ಕುಟುಂಬದವರನ್ನು ತೀವ್ರ ಆಘಾತಕ್ಕೀಡು ಮಾಡಿದೆ.

ಇನ್ನು ಕಳೆದ ತಿಂಗಳು ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಹತ್ತು ದಿನಗಳ ಹಿಂದೆ ಲಾಸ್ಯ ನಂದಿತಾ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ಅಂದ್ರೆ ಇದೀಗ ಅವರು ಪ್ರಯಾಣಿಸುತ್ತಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದು ಶಾಸಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಾಸಕಿಯ ನಿಧನಕ್ಕೆ ಬಿಆರ್​ಎಸ್ ನಾಯಕರು ಹಾಗೂ ತೆಲಂಗಾಣದ ಗಣ್ಯರು ಸಂತಾಪ ಸೂಚಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments