#Exclusive NewsTop Newsರಾಜಕೀಯಸುದ್ದಿ
ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ; ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಧಿಕ್ಕಾರ

ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ನಿನ್ನೆ ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯ ಸಾರ್ವಜನಿಕ ಶೌಚಾಲಯದ ಗೋಡೆಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿ, ಸೂಸೈಡ್ ಹಾಗೂ ಸುಫಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಅಂಟಿಸಿದ್ದರು. ಆ ಮೂಲಕ ಬೆಂಗಳೂರು ನಗರದ ಸೌಂದರ್ಯಕ್ಕೂ ಧಕ್ಕೆ ತರುವಂತೆ ಅಂಟಿಸುತ್ತಿದದ್ದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನಲೆ ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧ ಪಿಎಸ್ಐ ಶಶಿಧರ ವಣ್ಣೂರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.




