ಗದಗ: ಅಭಿಮಾನಿಗಳಿಗೆ ಮಾದರಿಯಾಗಬೇಕಿದ್ದ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್, ಶೀಘ್ರದಲ್ಲಿ ಬಿಡುಗಡೆಯಾಗಲಿ ಎಂದು ಮುಡಿಪು ಕಟ್ಟಿ ಫ್ಯಾನ್ಸ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಟ ದರ್ಶನ್ ಬಿಡುಗಡೆಗಾಗಿ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದ್ದಾರೆ. ಪಂಡಿತ ಪುಟ್ಟರಾಜ ಕವಿ ಗವಾಯಿಗಳು ಮತ್ತು ಪಂಚಾಕ್ಷರಿ ಗವಾಯಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ ಡಿಬಾಸ್ ಅಭಿಮಾನಿಗಳು.
ನಟ ದರ್ಶನ್ ಫೋಟೋ, ‘ಡೆವಿಲ್’ ಸಿನಿಮಾದ ಪೋಸ್ಟರ್ ಇಟ್ಟು ಅಭಿಮಾನಿಗಳು ಪೂಜೆ ಮಾಡಿದ್ದಾರೆ. ಈಡುಗಾಯಿ ಒಡೆದು ದರ್ಶನ್ ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂದು ಫ್ಯಾನ್ಸ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com