Monday, June 23, 2025
25.9 C
Bengaluru
Google search engine
LIVE
ಮನೆ#Exclusive NewsTop NewsAllu Arjun : ಇದೇ ಕಾರಣಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್‌

Allu Arjun : ಇದೇ ಕಾರಣಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್‌

ಹೈದರಾಬಾದ್‌: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಅಲ್ಲು ಅರ್ಜುನ್ ಮನೆಗೆ ಹೋಗಿ, ಅವರ ಬೆಡ್​ರೂಂ ಬಳಿಗೆ ಹೋಗಿ ಅಲ್ಲು ಅರ್ಜುನ್ ಅನ್ನು ಕರೆತರಲಾಗಿದೆ. ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ಮುಂಚೆ, ಈ ಬಗ್ಗೆ ಅಲ್ಲು ಅರ್ಜುನ್ ಪೊಲೀಸರು ತಮ್ಮನ್ನು ಬಂಧಿಸಿದ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ನಂತರ ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ವೇಳೆ, ಅವರ ತಂದೆ ಅಲ್ಲು ಅರವಿಂದ್ ಸಹ ಪೊಲೀಸ್ ಜೀಪು ಹತ್ತಿದ್ದರು, ಆದರೆ ಪೊಲೀಸರು ಅವರನ್ನು ಕೆಳಗೆ ಇಳಿಸಿ, ಕೇವಲ ಅಲ್ಲು ಅರ್ಜುನ್ ಅನ್ನು ಮಾತ್ರವೇ ಬಂಧಿಸಿ ಕರೆದೊಯ್ದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments