Thursday, November 20, 2025
22.5 C
Bengaluru
Google search engine
LIVE
ಮನೆ#Exclusive NewsTop Newsಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ

ಉತ್ತರಾಖಂಡ್​: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್​ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ.

ಖೀರ್​ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ಬಗ್ಗೆ ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ಪ್ರತಿಕ್ರಿಯೆ ನೀಡಿದ್ದು, ಧರಾಲಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ.

ಸದ್ಯ ಉತ್ತರಾಖಂಡ್​ ಸಿಎಂ ಪುಷ್ಕರ್​ ಸಿಂಗ್​ ಧಾಮಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನು ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ವ್ಯಾಪಕ ಹಾನಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments