ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ನಡೆದ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ..
ನಿನ್ನೆ ಮೈಸೂರು ದಸರಾ ಜಂಬೂ ಸವಾರಿಯು ಅದ್ದೂರಿಯಾಗಿ ನಡರವೇರಿದ್ದು, ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್ ಮುಂಭಾಗ ಶಿವರಾಜ ಕುಮಾರ್ ಕುಟುಂಬ ಸಮೇತ ಕುಳಿತಿದ್ದರು. ಆಗ ಮೆರವಣಿಗೆಯಲ್ಲಿ ಸಾಗಿ ಬಂದ ತಮಟೆಯ ಟೀಂನ ಸದ್ದಿಗೆ ಖುಷಿಯಿಂದಲೇ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಸ್ಟೆಪ್ ಹಾಕಿದರು.
ಇದೇ ವೇಳೆ ಮೆರವಣಿಗೆಯಲ್ಲಿ ಸಾಗಿ ಬಂದ ಧನಂಜಯ ಆನೆ ಶಿವರಾಜ್ ಕುಮಾರ್ಗೆ ಸೆಲ್ಯೂಟ್ ಮಾಡಿತು. ಸತತ 6ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಅಭಿಮನ್ಯು ಯಶಸ್ವಿಯಾಗಿ ಜಂಬೂಸವಾರಿ ನಡೆಸಿಕೊಟ್ಟಿದ್ದಾನೆ. ಲಕ್ಷಾಂತರ ಜನರು ವಿಶ್ವವಿಖ್ಯಾತ ದಸರಾವನ್ನು ಕಣ್ತುಂಬಿಕೊಂಡಿದ್ದಾರೆ.


