ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸಂಬಂಧಿಸಿದಂತೆ ದರ್ಶನ್ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಮಾರ್ಚ್ ನಲ್ಲಿ ನಡೆಯಲಿದ್ದು ದರ್ಶನ್ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ ಎನ್ನಲಾಗ್ತಿದೆ.
ಅರ್ಜಿಯ ವಿಚಾರಣೆ ಮಾರ್ಚ್ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ದರ್ಶನ್ ಅವರ ಕಾನೂನು ತಂಡ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ದರ್ಶನ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಈಗಾಗಲೇ ದರ್ಶನ್ ವಕೀಲರ ಕಪಿಲ್ ಸಿಬಲ್ರನ್ನು ಭೇಟಿಯಾಗಿ ಹೈಕೋರ್ಟ್ನಲ್ಲಿ ನಡೆದ ವಾದ-ಪ್ರತಿವಾದದ ಮಾಹಿತಿಯನ್ನು ನೀಡಲಾಗಿದೆ. ದರ್ಶನ್ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.


