#Exclusive NewsTop Newsರಾಜಕೀಯರಾಜ್ಯಸುದ್ದಿಹಣಕಾಸು

ಸಿದ್ದು ಬಜೆಟ್ ಅಭಿವೃದ್ಧಿ ಶೂನ್ಯ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ!

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರವಾಗಿ ಟೀಕಿಸಿದ್ದಾರೆ.

ಈ ಬಜೆಟ್ ರಾಜ್ಯವನ್ನು ಸಾಲದ ಸುಳಿಗೆ ತಳ್ಳುವಂತಿದ್ದು, ಇದರಿಂದ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಮೇಲೆ ದೀರ್ಘಕಾಲದ ಕೆಟ್ಟ ಪರಿಣಾಮ ಬೀರಲಿದೆ, ಸಾವಿರ ಕೋಟಿ ರೂಪಾಯಿಗಳ ಹೊಸ ತೆರಿಗೆಯನ್ನು ಜನಸಾಮಾನ್ಯರ ಮೇಲೆ ಹೇರಿರುವ ಈ ಬಜೆಟ್ ಅತ್ಯಂತ ಕಳಪೆಯಾಗಿದೆ 17 ಬಾರಿ ಬಜೆಟ್ ಮಂಡಿಸಿರುವ ಅನುಭವವಿರುವ ಸಿದ್ದರಾಮಯ್ಯ ಅವರಿಂದ ಇಂತಹ ನಿರಾಸಾದಾಯಕ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾರ್ಯಗಳಿಗೆ ಈ ಬಜೆಟ್‌ನಲ್ಲಿ ಆದ್ಯತೆ ನೀಡಿಲ್ಲ , ನೀರಾವರಿ ಕ್ಷೇತ್ರಕ್ಕೆ ಕೇವಲ 22 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿರುವುದು ಸರಿಯಲ್ಲ . ಅದರಲ್ಲೂ ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕನಿಷ್ಠ 25 ಸಾವಿರ ಕೋಟಿ ರೂಪಾಯಿಗಳ ಅಗತ್ಯವಿತ್ತು, ಆದರೆ ಸರ್ಕಾರ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಪ್ರಮುಖ ಇಲಾಖೆಗಳಿಗೂ ಅನುದಾನ ಕಡಿತಗೊಳಿಸಲಾಗಿದೆ. ಈ ಬಜೆಟ್ ರಾಜ್ಯದ ಪ್ರಗತಿಯನ್ನು ಹತ್ತರಿಂದ ಹದಿನೈದು ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ. ಸರ್ಕಾರದ ಸಚಿವರ ನಡುವಿನ ಗೊಂದಲದಿಂದಾಗಿ ದಲಿತ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು, ರಾಜ್ಯಪಾಲರ ಸಹಿ ಕೂಡ ಆಗಿದೆ. ಮೀಸಲಾತಿ ಪ್ರಮಾಣವನ್ನು 17% ಕ್ಕೆ ಏರಿಸಿ ಈಗ ಜಾರಿ ಮಾಡದೆ ಕುಂಟು ನೆಪ ಹೇಳುತ್ತಿರುವುದು ಸರಿಯಲ್ಲ. ನ್ಯಾಯಾಲಯವು ಯಾವುದೇ ತಡೆಯಾಜ್ಞೆ ನೀಡಿಲ್ಲದಿದ್ದರೂ ಸರ್ಕಾರ ಕಾಲಹರಣ ಮಾಡುತ್ತಿದೆ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button