Monday, December 8, 2025
16.7 C
Bengaluru
Google search engine
LIVE
ಮನೆಜಿಲ್ಲೆಹಾಸನ-ಸೊಲ್ಲಾಪುರ ಎಕ್ಸ್​ಪ್ರೇಸ್​​ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

ಹಾಸನ-ಸೊಲ್ಲಾಪುರ ಎಕ್ಸ್​ಪ್ರೇಸ್​​ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

ಕಲಬುರಗಿ: ಹಾಸನ-ಸೊಲ್ಲಾಪುರ ಎಕ್ಸ್​ಪ್ರೇಸ್​​ ರೈಲಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು ಜನರು ರೈಲಿನಿಂದ ಇಳಿದು ಓಡಿದ ಘಟನೆ ಕಲಬುರಗಿ ಜಿಲ್ಲೆ ಶಹಬಾದ್​​ ತಾಲೂಕಿನ ಮರತೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಬ್ರೇಕ್​​  ಬೈಂಡಿಂಗ್​ ತಾಂತ್ರಿಕ ದೋಷದಿಂದ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಗಮನಿಸಿದ ಪಾಯಿಂಟ್​ ಮ್ಯಾನ್​ ರೆಡ್​​ ಹ್ಯಾಂಡ್​​ ಸಿಗ್ನಲ್​ ತೋರಿಸಿ ರೈಲು ಸಿಬ್ಬಂದಿ ರೈಲು ನಿಲ್ಲಿಸಿದ್ದಾರೆ. ಎಂಜಿನ್​ನಿಂದ 4 ನೇ ಕೋಚ್ ನಲ್ಲಿ ಬ್ರೇಕ್ ಬೈಂಡಿಂಗ್​ಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಪ್ರಯಾಣಿಕರು ರೈಲಿನಿಂದ ಇಳಿದು ಬಂದಿದ್ದಾರೆ. ಬಳಿಕ ಸಿಬ್ಬಂದಿ ಬ್ರೇಕ್ ಬೈಡಿಂಗ್ ದೋಷ ಸರಿಪಡಿಸಿದ್ದು, ಬಳಿಕ ರೈಲು ಸಂಚಾರ ಆರಂಭಿಸಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments