Wednesday, April 30, 2025
24.6 C
Bengaluru
LIVE
ಮನೆಜಿಲ್ಲೆಭಾವುಕರಾಗಿ ರಾಯ್‌ ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ

ಭಾವುಕರಾಗಿ ರಾಯ್‌ ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ

ದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿ ಇಳಿಯುತ್ತಿಲ್ಲ. ಬದಲಾಗಿ ರಾಜಸ್ಥಾನದಿಂದ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಜೈಪುರದಲ್ಲಿ ನಾಮಪತ್ರ ಕೂಡ ಸಲ್ಲಿಸಿದ್ದಾರೆ. ಈ ಬಗ್ಗೆ ಅವರು ಗುರುವಾರ (ಫೆಬ್ರವರಿ 15) ಉತ್ತರ ಪ್ರದೇಶದ ರಾಯ್‌ಬರೇಲಿ ಜನತೆಗೆ ಮಾಹಿತಿ ನೀಡಿ, ಅನಾರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. ಸೋನಿಯಾ ಗಾಂಧಿ 2004ರಿಂದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ 77 ವರ್ಷದ ಕಾಂಗ್ರೆಸ್ ನಾಯಕಿ ರಾಯ್‌ಬರೇಲಿ ಕ್ಷೇತ್ರದಲ್ಲಿ ತಮ್ಮ ಕುಟುಂಬದ ಸದಸ್ಯರೊಬ್ಬರು ಸ್ಪರ್ಧಿಸುವ ಸಾಧ್ಯತೆಯ ಬಗ್ಗೆಯೂ ಸುಳಿವುಗಳನ್ನು ನೀಡಿದ್ದಾರೆ.

ಸೋನಿಯಾ ಗಾಂಧಿ ಹೇಳಿದ್ದೇನು?

ಸೋನಿಯಾ ಗಾಂಧಿ ಭಾವುಕರಾಗಿ ರಾಯ್‌ಬರೇಲಿ ಕ್ಷೇತ್ರದ ಜನತೆಗೆ ಸಂದೇಶವೊಂದನ್ನು ನೀಡಿದ್ದಾರೆ. ʼʼನಾನು ಇಂದು ಏನಾಗಿದ್ದೀನೋ ಅದಕ್ಕೆ ಹೆಮ್ಮೆ ಇದೆ. ನಿಮ್ಮಿಂದಾಗಿ ನಾನು ಇಲ್ಲಿ ನಿಂತಿದ್ದೇನೆ. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಬಲ್ಲೆ. ಈಗಿನ ಆರೋಗ್ಯ ಮತ್ತು ವಯಸ್ಸಿನ ಸಮಸ್ಯೆಗಳಿಂದಾಗಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಈ ನಿರ್ಧಾರದ ನಂತರ ನೇರವಾಗಿ ನಿಮ್ಮ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಗುವುದಿಲ್ಲ. ಆದರೆ ನನ್ನ ಹೃದಯ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ಎಂದಿನಂತೆ ನೀವು ಭವಿಷ್ಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ವಿಶ್ವಾಸ ನನಗಿದೆ” ಎಂದು ಸೋನಿಯಾ ಗಾಂಧಿ ಬರೆದುಕೊಂಡಿದ್ದಾರೆ. ಜತೆಗೆ ತಮ್ಮ ಪತಿ ರಾಜೀವ್‌ ಗಾಂಧಿ ಮತ್ತು ಅತ್ತೆ ಇಂದಿರಾ ಗಾಂಧಿ ಅವರನ್ನು ಕಳೆದುಕೊಂಡ ಬಳಿಕ ಅಲ್ಲಿಗೆ ಬಂದ ತಮಗೆ ಜನರು ತೋರಿದ ಪ್ರೀತಿಯನ್ನು ನೆನಪಿಸಿಕೊಂಡಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments