Thursday, November 20, 2025
19.1 C
Bengaluru
Google search engine
LIVE
ಮನೆರಾಜ್ಯಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್​ಪಿ

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್​ಪಿ

ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಬಾರಿ ಟೀಕೆ ವ್ಯಕ್ತವಾಗಿತ್ತು. ಹೀಗಿರುವಾಗಲೇ ವರ್ಗಾವಣೆ ಅಸ್ತ್ರ ಪ್ರಯೋಗ ಮಾಡಲಾಗಿದೆ. ಆರು ಜನ ಕಾನ್ಸ್ಟೇಬಲ್​​ಗಳನ್ನು ವರ್ಗಾವಣೆ  ಮಾಡಿ ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಎಎಸ್​ಐ ಬಜಿ ದಳವಾಯಿ, ಡಿಜೆ ಶಿವಪುರ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ಅವರನ್ನು ಬಾದಾಮಿ ಠಾಣೆಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಿ ಎಸ್​ಪಿ  ಅಮರನಾಥ ರೆಡ್ಡಿ ಆದೇಶ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments