ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದ ಸುಳ್ಳು ಸುದ್ದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದ್ದ ವಿದ್ಯಾರ್ಥಿನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ…
ದಾವಣಗೆರೆ, ಸೆಪ್ಟೆಂಬರ್ 06: ದಾವಣಗೆರೆಯಲ್ಲಿ (Davangere) ಗ್ಯಾಂಗ್ ರೇಪ್ ಆಗಿದೆ ಅಂತ ಸಾಮಾಜಿಕ ಜಾಲತಾಣದಲ್ಲಿ (Social Media) ಹರಡಿದ್ದ ಸುಳ್ಳು ಸುದ್ದಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ಮೂಲದ ವಿದ್ಯಾರ್ಥಿಯೊಬ್ಬಳು (Student) ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ “ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಓರ್ವ ವಿದ್ಯಾರ್ಥಿನಿ ಮೇಲೆ ಯುವಕರಿಂದ ಗ್ಯಾಂಗ್ ರೇಪ್ ಆಗಿದೆ. ಹುಷಾರಾಗಿ ಓಡಾಡಿ. ಒಬ್ಬಂಟಿಯಾಗಿ ಓಡಾಡಬೇಡಿ ಎಂದು ಪೋಸ್ಟ್ ಹಾಕಿಕಿದ್ದಳು. ಇದು ರಾಜ್ಯಾದ್ಯಂತ ಹರಿದಾಡಿತ್ತು.
ಈ ವಿಚಾರವಾಗಿ ದಾವಣಗೆರೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಳ್ಳು ಸುದ್ದಿ ಅಂತ ಸಾಬೀತಾಗಿದೆ. ಬಳಿಕ ಪೊಲೀಸರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರನ್ನು ಕರೆಸಿ, ಇನ್ನೊಮ್ಮೆ ಈ ರೀತಿ ಪೋಸ್ಟ್ ಹಾಕದಂತೆ ತಾಕೀತು ಮಾಡಿದರು. ಇದು ಅಪರಾಧವಾಗಿದ್ದು, ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಉಮಾ ಪ್ರಶಾಂತ ಎಚ್ಚರಿಕೆ ನೀಡಿದರು…