Tuesday, February 10, 2026
24.4 C
Bengaluru
Google search engine
LIVE
ಮನೆದೇಶ/ವಿದೇಶಕಾಲ್ತುಳಿತ ದುರಂತ; 3 ದಿನದ ನಂತರ ಮೌನ ಮುರಿದ ವಿಜಯ್

ಕಾಲ್ತುಳಿತ ದುರಂತ; 3 ದಿನದ ನಂತರ ಮೌನ ಮುರಿದ ವಿಜಯ್

ಚೆನ್ನೈ: ತಮಿಳುನಾಡು ಕರೂರುನಲ್ಲಿ ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿಯ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದರಂತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತ ಬಗ್ಗೆ ಇದೀಗ ವಿಜಯ್​ ದಳಪತಿ ಪ್ರತಿಕ್ರಿಯೆ ನೀಡಿದ್ದಾರೆ..

ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ನನ್ನ ಜೀವನದಲ್ಲೇ ಇಂತಹ ನೋವಿನ ದಿನಗಳನ್ನು ನಾನು ಅನುಭವಿಸಿಲ್ಲ. ನಿಜಕ್ಕೂ ಈ ಸಂಗತಿಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ, ಬರೀ ನೋವೇ ತುಂಬಿಕೊಂಡಂತಾಗಿದೆ. ಜನರು ನನ್ನ ಮೇಲಿನ ಪ್ರೀತಿಯಿಂದಾಗಿ ನನ್ನನ್ನು ನೋಡಲು ಬರುತ್ತಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಯಾವಾಗಲೂ ಚಿರಋಣಿ. ಆದರೆ ಆ ಎಲ್ಲದಕ್ಕೂ ಮಿಗಿಲಾಗಿ ಜನರ ರಕ್ಷಣೆಯೇ ನನ್ನ ಮೊದಲ ಆದ್ಯತೆ. ನಾನು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ಕೊಡುತ್ತೇನೆ. ಶೀಘ್ರದಲ್ಲಿಯೇ ಈ ಘಟನೆ ಹಿಂದಿನ ಸತ್ಯ ಬಹಿರಂಗವಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಈ ಘಟನೆಗೂ ಮುನ್ನ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದೆ. ಆದರೆ ಏನಾಗಬಾರದು ಎಂದುಕೊಂಡಿದ್ದೆ, ಅದೇ ನಡೆದು ಹೋಗಿದೆ. ನಾನು ಒಬ್ಬ ಮನುಷ್ಯ. ಘಟನೆಯಲ್ಲಿ ಇಷ್ಟೊಂದು ಜನರಿಗೆ ತೊಂದರೆಯಾದಾಗ ನಾನು ಅಲ್ಲಿಯೇ ಇರಬಹುದಿತ್ತು. ಆದರೆ ನಾನಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದು ಅಲ್ಲಿಂದ ಹೊರಟು ಹೋದೆ ಎಂದಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿಕೊಂಡಿದ್ದು, ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ. ಆದರೆ ನನ್ನ ಬೆಂಬಲಿಗರಿಗೆ ಏನು ಮಾಡಬೇಡಿ. ನಾನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇರುತ್ತೇನೆ. ನೀವು ನನ್ನ ಮೇಲೆ ಯಾವ ರೀತಿ ಬೇಕಾದರೂ ಕ್ರಮ ಕೈಗೊಳ್ಳಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments