ರಾಜಕೀಯರಾಜ್ಯ

ಬಿಜೆಪಿಗೆ ಮತ್ತೆ ಮುಜುಗರ ತಂದ ಎಸ್.ಟಿ.ಎಸ್ : “ಕೈ” ಅಭ್ಯರ್ಥಿ ಪರ ಸೋಮಶೇಖರ್ ಪ್ರಚಾರ!

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರ ಮಾಡಿದ್ದಾರೆ..ಇದರಿಂದ ಬಿಜೆಪಿ ಮುಜುಕ್ಕರಕ್ಕೊಳಗಾಗಿದೆ.ಯಶವಂತಪುರ ಕ್ಷೇತ್ರದ ಶಿಕ್ಷಕರ ಜೊತೆ ಸೋಮಶೇಖರ್ ಸಭೆ ನಡೆಸಿದ್ದರು. ಈ ವೇಳೆ ಪುಟ್ಟಣ್ಣಗೆ ಮತ ನೀಡುವಂತೆ ಪ್ರಚಾರ ಮಾಡಿದ್ದಾರೆ. ವಿಧಾನಸಭಾ ಅಧಿವೇಶನ ಆರಂಭವಾಗಿದ್ದು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿ ಪುಟ್ಟಣ್ಣ ಪರ ಪತಯಾಚನೆ ಮಾಡಿದ್ದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.

ಸೋಮಶೇಖರ್‌ ಅವರು ಬಿಜೆಪಿಗೆ ಮುಜುಗರ ಮಾಡುತ್ತಿರುವುದು ಇದು ಹೊಸದೆನಲ್ಲ. ಈ ಹಿಂದೆ ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಕ್ಷೇತ್ರದ ಬೆಂಬಲಿಗರು, ಆಪ್ತರು ಹಾಗೂ ಕಾರ್ಯಕರ್ತರ ಸಭೆಯನ್ನು ಸೋಮಶೇಖರ್‌ ಕರೆದಿದ್ದರು.

ಈ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಗುಣಗಾನವನ್ನು ಮಾಡಿದ್ದ ಎಸ್.ಟಿ.ಸೋಮಶೇಖರ್ ಪುಟ್ಟಣ್ಣ ಪರ ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದೆ ಇರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ.

Comments (0)

Your email address will not be published. Required fields are marked *

Back to top button